ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಶೇ.100 ಫಲಿತಾಂಶ ದಾಖಲಿಸಿದ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. 25 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಮಹಮ್ಮದ್ ಸಫ್ವಾನ್ 568 ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಪ್ರೌಢಶಾಲಾ ವಿಭಾಗಕ್ಕೆ ಶೇ. 100 ಫಲಿತಾಂಶ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರೌಢಶಾಲಾ ವಿಭಾಗವು ಎಸ್ ಎಸ್ ಎಲ್ ಸಿ ಯಲ್ಲಿ ಶೇ100 ಫಲಿತಾಂಶ ದಾಖಲಿಸಿದೆ.ಒಟ್ಟು 79 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 79ಮಂದಿ ತೇರ್ಗಡೆ ಆಗಿ ಶೇ100 ಫಲಿತಾಂಶ ದಾಖಲಿಸಿದೆ.20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆಸುಜನ್.ಎ.ಜೆ.595, ರೀತೆಶ್.ಕೆ.ಜೆ 587, ಸೇರಿದಂತೆ 20 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ
Ad Widget

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಶೇ.100 ಫಲಿತಾಂಶ ದಾಖಲಿಸಿದ ಹರಿಹರ ಪಳ್ಳತ್ತಡ್ಕ ಪ್ರೌಢಶಾಲೆ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಹರಿಹರ ಪಳ್ಳತ್ತಡ್ಕದ ಸರ್ಕಾರಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 02 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಬ್ಬರೂ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಧೀರಜ್ 455, ಶ್ರಾವಣಿ 397 ಅಂಕ ಪಡೆದಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

ಎಸ್ ಎಸ್ ಎಲ್ ಸಿ ಯಲ್ಲಿ ಬೆಳ್ಳಾರೆ ಜ್ಞಾನದೀಪ ಸಂಸ್ಥೆಗೆ ಉತ್ತಮ ಫಲಿತಾಂಶ

8-9ನೇ ತರಗತಿಯಲ್ಲಿ ಅನುತ್ತೀರ್ಣರಾಗಿ ಅಥವಾ ಓದು ನಿಲ್ಲಿಸಿ ಖಾಸಗಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ 28 ವಿದ್ಯಾರ್ಥಿಗಳ ಪೈಕಿ 23 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 82 ಫಲಿತಾಂಶ ದಾಖಲಾಗಿದೆ. ಮೂವರು ಪ್ರಥಮ ದರ್ಜೆಯಲ್ಲಿ ಆರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಮೊಹಮ್ಮದ್...

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. ಇಲ್ಲಿನ ವಿದ್ಯಾರ್ಥಿನಿ ನೇಹಾ.ಸಿ.ಪಿ 612 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಪರೀಕ್ಷೆಗೆ 19 ವಿದ್ಯಾರ್ಥಿಗಳು ಹಾಜರಾಗಿ 12 ವಿದ್ಯಾರ್ಥಿಯರು ವಿಶಿಷ್ಟ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಜ್ಞಾನದೀಪ ಎಲಿಮಲೆಗೆ ಶೇ.100 ಫಲಿತಾಂಶ

ಎಸ್. ಎಸ್. ಎಲ್. ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಎಲಿಮಲೆಯ ಜ್ಞಾನದೀಪ ವಿದ್ಯಾ ಸಂಸ್ಥೆ 100% ಫಲಿತಾಂಶ ದಾಖಲಿಸಿಕೊಂಡಿದೆ. ಪರೀಕ್ಷೆ ಬರೆದ 23 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾದರೆ ಉಳಿದೆಲ್ಲ ವಿದ್ಯಾರ್ಥಿಗಳು 67% ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ತೃಷಾ. ಎಮ್. ಸಿ. 588 ಅಂಕ ಗಳಿಸಿರುತ್ತಾರೆ.

ಪುತ್ತೂರಿನ ವಿದ್ಯಾಮಾತಾದಲ್ಲಿ “ಬೇಸಿಗೆ ಕೌಶಲ ಸಂಭ್ರಮ 26” ಕ್ಕೆ ಚಾಲನೆ – “ವಿದ್ಯಾಮಾತಾದ ಕೌಶಲ್ಯಯುಕ್ತ ತರಬೇತಿಯು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿದೆ” : ಶ್ರೀಮತಿ ರಾಜೇಶ್ವರಿ ಆಚಾರ್ ; ತುಂಬಿ ತುಳುಕಿದ ಕೌಶಲ ಸಂಭ್ರಮದ ತರಗತಿಗಳು

“ಹೆಸರಾಂತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲೇ ಬೇಸಿಗೆಯ ರಜಾ ಅವಧಿಯಲ್ಲಿ ವಿಶೇಷ ಕೌಶಲ ಸಂಭ್ರಮದ ಅಡಿಯಲ್ಲಿ ಹಲವು ಕೌಶಲ್ಯಭರಿತ ತರಬೇತಿಯನ್ನು ವಿವಿಧ ಆಯಾಮದಲ್ಲಿ ನೀಡಿ ಭವಿಷ್ಯದ ಅಧಿಕಾರಿಗಳನ್ನು ಸೃಷ್ಟಿಸುವ ಕಾರ್ಯ ಮಾಡುತ್ತಿರುವುದು ಪ್ರಶಂಸನೀಯ” ಎಂದು ರೋಟರಿ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇದರ ನಿಕಟ ಪೂರ್ವ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಆಚಾರ್...

ಏ.25 ರಂದು ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ಏ.25 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ...

ಬೆಳ್ಳಾರೆ : ಡಾ. ಕೆ.ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅರೆಭಾಷೆ ಐಸಿರಿ – ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ”

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಹಯೋಗದಲ್ಲಿ ಎ.21ರಂದು ಡಾ. ಅಂಬೇಡ್ಕರ್ ಸಭಾಭವನದಲ್ಲಿ “ಅರೆಭಾಷೆ ಐಸಿರಿ - ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ” ನಡೆಯಿತು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರಿಂದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ...

ಇಂದಿನ(ಏಪ್ರಿಲ್ 23) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಸ್ಥಿರತೆ ಕಾಯ್ದುಕೊಂಡ ಅಡಿಕೆ-ಕಾಳುಮೆಣಸು ; ರಬ್ಬರ್ ಬೆಲೆಯಲ್ಲಿ ಭರ್ಜರಿ ಚೇತರಿಕೆ! ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 23 ಏಪ್ರಿಲ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
Loading posts...

All posts loaded

No more posts

error: Content is protected !!