ಬೆಂಗಳೂರಿನಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ ಅವರಿಗೆ “ಜನತಾ ಅವಾರ್ಡ್ 2026” ಪ್ರಶಸ್ತಿ ಪ್ರಧಾನ

ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕುಮಾರ್ ಪೆರ್ನಾಜೆ ಅವರನ್ನು ಇತ್ತೀಚೆಗೆ ಬೆಂಗಳೂರಿನ ನಾಗರಬಾವಿ ಕೆ.ಎಲ್.ಇ ಕಾನೂನು ಕಾಲೇಜ್ ಹತ್ತಿರ ಅರಮನೆ ವೆನ್ಯು ನಲ್ಲಿ ಮನರಂಜನೆ ಫ್ಯಾಶನ್ ಶೋ ಮ್ಯೂಸಿಕಲ್ ನೈಟ್ ನೃತ್ಯ ಸಂಜೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಜೇನು ಕೃಷಿ ಕ್ಷೇತ್ರದಲ್ಲಿನ ಸಾಧನೆಗಳ ಸರದಾರನಿಗೆ ಗಣನೀಯ ಸೇವೆ...

ಶ್ರೀಮತಿ ಕೆ.ವಿ ಹರಿಣಿ ಕಲ್ಕಳ ನಿಧನ

ಸುಳ್ಯದ ಕಾಯರ್ತೋಡಿ ಕಲ್ಕಳ ಮನೆ ಕೆ.ವಿ ವೆಂಕಟ್ರಮಣ ಗೌಡರ ಧರ್ಮಪತ್ನಿ ಶ್ರೀಮತಿ ಹರಿಣಿ.ಕೆ.ವಿ ರವರು ಅಲ್ಪಕಾಲದ ಅಸೌಖ್ಯದಿಂದ ಏ.16ರಂದು ನಿಧನರಾದರು. ಮೃತರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರ ಕೆ.ವಿ ಮೋಹನ್, ಪುತ್ರಿ ಶ್ರೀಮತಿ ಬೀನಾ, ಅಳಿಯ ಕೆ. ನಾಗಪ್ಪ ಗೌಡ ಮಂಗಳೂರು, ಸೊಸೆ ಶ್ರೀಮತಿ ಪ್ರತಿಮಾ ಮೋಹನ್ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ...
Ad Widget

ಐನೆಕಿದು : ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಐನೆಕಿದು ಗ್ರಾಮದ ಖಾಸಗಿ ಜಾಗದ ಹತ್ತಿರದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹದ ಅಸ್ಥಿಪಂಜರವೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದ್ದು, ಇದು ಸುಮಾರು ನಾಲ್ಕು ತಿಂಗಳುಗಳ ಹಿಂದೆ ನಾಪತ್ತೆಯಾಗಿದ್ದ ಯಶವಂತ ಕಾಜಿಮಡ್ಕ ಎಂಬುವವರ ಮೃತದೇಹ ಆಗಿರಬಹುದೇ ಎನ್ನುವ ಶಂಕೆ ಇದೀಗ ವ್ಯಕ್ತವಾಗಿದೆ. ಯಶವಂತ ರವರು ಕಳೆದ ನಾಲ್ಕು ತಿಂಗಳುಗಳ ಹಿಂದೆ ನಾಪತ್ತೆಯಾಗಿದ್ದು, ಪತ್ತೆಯಾಗಿರಲಿಲ್ಲ‌. ಈ ಕುರಿತು ಸುಬ್ರಹ್ಮಣ್ಯ...

ಏ.25 ರಂದು ಮಂಗಳೂರಿನಲ್ಲಿ ಕನ್ನಡ ಝೇಂಕಾರ ಕಾರ್ಯ ವಿಧಾನ : ಎಂ.ಎ. ಮುಸ್ತಫಾ ಬೆಳ್ಳಾರೆ ಕವನ ವಾಚನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ರಾಣಿ ಪುಷ್ಪಲತಾ ದೇವಿ ಸಾರಥ್ಯದ ಕರ್ನಾಟಕ ಸಾಮಾಜಿಕ, ಸಾಂಸ್ಕೃತಿಕ ಅಭಿವೃಧ್ಧಿ ಪ್ರತಿಷ್ಠಾನ ಮಂಗಳೂರು ಇವುಗಳ ಸಂಯುಕ್ತ ಸಮಾರಂಭದಲ್ಲಿ ಕನ್ನಡ ಝೇಂಕಾರ ಕಾರ್ಯಕ್ರಮ ಮಂಗಳೂರು ಪುರಭವನದ ಎದುರುಗಡೆಯ ರಾಜಾಜಿ ಪಾರ್ಕಿನಲ್ಲಿ ಏ.25ರಂದು ಸಂಜೆ ನಡೆಯಲಿದ್ದು, ಕವಿಗೋಷ್ಠಿ, ಪ್ರಶಸ್ತಿ ಪ್ರದಾನ, ಗೀತಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮೆರುಗು ತುಂಬಲಿದ್ದು, ಸಮಧುರ ಸಂಜೆಯ ಅನಾವರಣವಾಗಲಿದೆ....

ಸುಳ್ಯದ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ರಿಯಾಯಿತಿ – ಗ್ರಾಹಕರಿಂದ ಉತ್ತಮ ಸ್ಪಂದನೆ

ಸುಳ್ಯದ ಮುಖ್ಯರಸ್ತೆ ಕೊಯಿಂಗೋಡಿ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಕೃಷ್ಣ ಭಟ್ & ಸನ್ಸ್ ಜ್ಯುವೆಲ್ಲರ್ಸ್ ನಲ್ಲಿ ಏ.19ರಂದು ಅಕ್ಷಯ ತೃತೀಯ ಪ್ರಯುಕ್ತ ಚಿನ್ನಾಭರಣ ಖರೀದಿಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಚಿನ್ನಾಭರಣಗಳನ್ನು ಖರೀದಿಸಿದರು. ಬೆಳಿಗ್ಗೆಯಿಂದಲೇ ಮಳಿಗೆಯಲ್ಲಿ ಗ್ರಾಹಕರು ಕಿಕ್ಕಿರಿದು ಸೇರಿದ್ದು, ತಮಗಿಷ್ಟವಾದ ಚಿನ್ನಾಭರಣ ಖರೀದಿಸಿದರು. ವಿವಿಧ...

ಮೌರ್ಯ ದೊಡ್ಡಮನೆ ಶೇಣಿ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ರನ್ನರ್‌ಅಪ್

ಪುತ್ತೂರಿನ ಅಕ್ಷಯ ಕಾಲೇಜಿನಲ್ಲಿ ಏ.20ರಂದು ನಡೆದ ಪ್ರಿನ್ಸೆಸ್ & ಪ್ರಿನ್ಸ್ ಆಫ್ ದಕ್ಷಿಣ ಕನ್ನಡ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ದೊಡ್ಡಮನೆ ಶೇಣಿಯ ಮೌರ್ಯ.ಎಸ್ ದ್ವಿತೀಯ ರನ್ನರ್‌ಅಪ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಬೆಳ್ಳಾರೆಯ ಕೆ.ಪಿ.ಎಸ್ ನಲ್ಲಿ 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಇವರು ಅಮರ ಪಡ್ನೂರು ಗ್ರಾಮದ ಶೇಣಿ ದೊಡ್ಡಮನೆ ಡಿ.ಕೆ ಸುರೇಶ್ ರವರ ಪುತ್ರ.

ಅಜ್ಜನಗದ್ದೆ : ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ

ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ, ಗರುಡ ಯುವಕ ಮಂಡಲ(ರಿ.) ಚೊಕ್ಕಾಡಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್(ರಿ.) ಚೊಕ್ಕಾಡಿ ಇವರ ಆಶ್ರಯದಲ್ಲಿ ಐದು ದಿನಗಳ ವ್ಯಕ್ತಿತ್ವ ವಿಕಸನ ಬೇಸಿಗೆ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜನಗದ್ದೆ ಇಲ್ಲಿ ಯಶಸ್ವಿಯಾಗಿ ನಡೆಯಿತು.ಶಿಬಿರವು ಏಪ್ರಿಲ್ 11ರಂದು ಬಾಲಕೃಷ್ಣ ಬೊಳ್ಳೂರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪವಾಣಿ ಅವರ ಉಪಸ್ಥಿತಿಯಲ್ಲಿ...

ಅಜಿತ್.ಕೆ ಕೋಡಿಂಬಾಳ ರವರಿಗೆ ಪಿ.ಹೆಚ್.ಡಿ ಪದವಿ

ಕಡಬ ತಾಲೂಕಿನ ಕೋಡಿಂಬಾಳದ ಅಜಿತ್.ಕೆ ರವರು ಕೋಯಂಬತ್ತೂರಿನ ಭಾರತೀಯ ವಿಶ್ವವಿದ್ಯಾಲಯದಿಂದ ಡಾಕ್ಟರ್ ಆಫ್ ಫಿಲಾಸಫಿ(ಪಿ.ಹೆಚ್.ಡಿ) ಪದವಿಯನ್ನು ಪಡೆದಿದ್ದಾರೆ.ಅಜಿತ್ ರವರು “ಫಾಲಿಸೈಟಿಕ್ ಓವರಿ ಸಿಂಡ್ರೋಮ್ ಗಾಗಿ ಆಹಾರ ಕ್ರಮದ ಮಧ್ಯಸ್ಥಿಕೆ ಮತ್ತು ಜೀವನಶೈಲಿ ಮಾರ್ಪಾಡು - ಒಂದು ನಿರೀಕ್ಷಿತ ಮಧ್ಯಸ್ಥಿಕೆಯ ಅಧ್ಯಯನ(dietary intervention and lifestyle modification in polycystic ovary syndrome - A prospective...

ಏ.24ರಿಂದ ಮೇ.03ರ ತನಕ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪುನರ್ ನಿರ್ಮಾಣ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ; ಹತ್ತು ದಿನಗಳ ಕಾಲ ನಡೆಯಲಿರುವ ವೈದಿಕ – ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪುನರ್ ನಿರ್ಮಾಣ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದದೊಂದಿಗೆ, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.24ರಿಂದ ಮೇ.3ರ ತನಕ ಹತ್ತು ದಿನಗಳ ಕಾಲ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.ಹಸಿರುವಾಣಿ ಸಮರ್ಪಣೆ - ಉಗ್ರಾಣ ಮುಹೂರ್ತ...

ಗುತ್ತಿಗಾರು : ನ್ಯೂ ಮೂಕಾಂಬಿಕಾ ಜ್ಯುವೆಲ್ಲರ್ಸ್ ಸ್ಥಳಾಂತರಗೊಂಡು ಶುಭಾರಂಭ

ಗುತ್ತಿಗಾರಿನ ದೇವಿಸಿಟಿ ಕಾಂಪ್ಲೆಕ್ಸ್ ನಲ್ಲಿ ಕಳೆದ 6 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನ್ಯೂ ಮೂಕಾಂಬಿಕಾ ಜ್ಯುವೆಲ್ಲರ್ಸ್ ಸ್ಥಳಾಂತರಗೊಂಡು ಶ್ರೀ ಮುತ್ತಪ್ಪೇಶ್ವರ ದೈವಸ್ಥಾನದ ಹತ್ತಿರದ ಶ್ರೀಹರಿ ಕಾಂಪ್ಲೆಕ್ಸ್‌ ಗೆ ಏ.11ರಂದು ಶುಭಾರಂಭಗೊಂಡಿತು. ಮುಖಂಡ ವೆಂಕಟ್ ವಳಲಂಬೆ ಉದ್ಘಾಟಿಸಿದರು. ಕೇಂದ್ರ ರಬ್ಬರ್ ಭೋರ್ಡ್ ನಿರ್ದೆಶಕ ಮುಳಿಯ ಕೇಶವ ಭಟ್ ದೀಪ ಬೆಳಗಿಸಿದರು. ಈ ಸಂದರ್ಭದಲ್ಲಿ ಶ್ರೀಹರಿ ಕಾಂಪ್ಲೆಕ್ಸ್ ನ ಮಾಲಕ...
Loading posts...

All posts loaded

No more posts

error: Content is protected !!