ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ  ಕು. ಪೂರ್ವಿ ಹಾಸ್ಪರೆ ಡಿಸ್ಟಿಂಕ್ಷನ್

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರೆಸಿಡೆನ್ಸಿಯಲ್ ಶಾಲೆ ಉಪ್ಪಿನಂಗಡಿ ಪಡ್ಡಯೂರ್ ಇಲ್ಲಿನ ವಿದ್ಯಾರ್ಥಿನಿ ಕು. ಪೂರ್ವಿ ರವರು 625ರಲ್ಲಿ 578 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ  ಉತ್ತೀರ್ಣರಾಗಿದ್ದಾರೆ. ಈಕೆ ತೊಡಿಕಾನ ಗ್ರಾಮದ ಹಾಸ್ಪರೆ ಸತೀಶ್ ಮತ್ತು ಭಾಗೀರಥಿ ಅವರ ಪುತ್ರಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಟೆ ಕುಲ್ಕುಂದದಲ್ಲಿ ಮನ್ ಕೀ ಬಾತ್ ವೀಕ್ಷಣೆ

ಸುಬ್ರಮಣ್ಯ ಶಕ್ತಿ ಕೇಂದ್ರದ ಕುಲ್ಕುಂದ ಬೂತ್ ಸಂಖ್ಯೆ 113 ರ ಕಾರ್ಯಕರ್ತರಾದ ಜನಾರ್ದನ ಪಲ್ಲಿಗದ್ದೆ ಇವರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ವೀಕ್ಷಣೆ ನಡೆಯಿತು, ಇಲ್ಲಿಗೆ ಭಾಜಪ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾದ ವಿನೋದ್ ತಾವಟೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸುಳ್ಯ  ಶಾಸಕಿ ಕುಮಾರಿ ಭಾಗೀರಥಿ ಮರುಳ್ಯ ಭಾಜಪ...
Ad Widget

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಮಹಾಸಭೆ – ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಮಹಾಸಭೆ ಹಾಗೂ ಆರೋಗ್ಯ ನಿಧಿ ಮತ್ತು ವಿದ್ಯಾನಿಧಿ ಹಸ್ತಾಂತರ ಕಾರ್ಯಕ್ರಮವು ಸುಳ್ಯದ ವರ್ತಕರ ಭವನ ಏ.26 ರಂದು ನಡೆಯಿತು. ಸಂಘದ ಅಧ್ಯಕ್ಷ ವೆಂಕಟ್ರಮಣ ಬೇರ್ಪಡ್ಕ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆದು ನೂತನ ಸಮಿತಿ ಅಧ್ಯಕ್ಷರಾಗಿ ಸುರೇಶ್ ಕರ್ಲಪ್ಪಾಡಿ...

ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ – ಶ್ರೀ ಉಳ್ಳಾಕುಲು ದೈವದ ಅಡ್ಡಣಪೆಟ್ಟು

ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಎ.23ರಿಂದ ಆರಂಭಗೊಂಡಿದ್ದು, ಎ.27ರ ತನಕ ಜರುಗಲಿದೆ. ಎ.23ರಂದು ಬೆಳಿಗ್ಗೆ ಹಸಿರುವಾಣಿ ಸಮರ್ಪಣೆ ಹಾಗೂ ಉಗ್ರಾಣ ತುಂಬಿಸಲಾಯಿತು. ರಾತ್ರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ದೇವರಿಗೆ ರಂಗಪೂಜೆ ನಡೆಯಿತು.ಎ.24ರಂದು ಬೆಳಿಗ್ಗೆ ಗಣಪತಿ ಹವನ, ಭಜನೆ, ಹರಕೆಯ ತುಲಾಭಾರ ಸೇವೆ, ದೇವರಿಗೆ ಮಹಾಪೂಜೆ ನಂತರ ಸಮಾರಾಧನೆ ನಡೆಯಿತು. ಎ.25ರಂದು ಬೆಳಿಗ್ಗೆ ಶ್ರೀ...

ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ವಲಯಾಧ್ಯಕ್ಷರ ಅಧೀಕೃತ ಭೇಟಿ – ಜೇಸಿಐ ಸುಳ್ಯ ಪಯಸ್ವಿನಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಶ್ಲಾಘನೀಯ : ಸಂತೋಷ್ ಶೆಟ್ಟಿ

ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ವಲಯಾಧ್ಯಕ್ಷರ ಅಧೀಕೃತ ಭೇಟಿ ಕಾರ್ಯಕ್ರಮವನ್ನು ಎ.25ರಂದು ಸಂಚಯ ನಿವಾಸ ಚೂಂತಾರು ಇಲ್ಲಿ ಹಮ್ಮಿಕೊಳ್ಳಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿದ್ದರು. ಜೇಸಿಐ ವಲಯ 15ರ ವಲಯಾಧ್ಯಕ್ಷರಾದ ಜೆ.ಎಪ್.ಎಪ್ ಸಂತೋಷ್ ಶೆಟ್ಟಿ ಘಟಕವನ್ನುದ್ದೇಶಿಸಿ ಪ್ರಶಂಸೆ ವ್ಯಕ್ತಪಡಿಸುತ್ತಾ, ವಲಯದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು....

ಭಕ್ತಿ, ಪರಂಪರೆ ಮತ್ತು ತ್ಯಾಗದ ಸಂಕೇತ ; ಮಂಡೆಕೋಲು ಉಳ್ಳಾಕುಲು ನೇಮ ಮತ್ತು ಅಡ್ಡಣ ಪೆಟ್ಟು

✍️ ಸುಶ್ಮಿತಾ ಉಗ್ರಾಣಿಮನೆ ಕರಾವಳಿ ಭಾಗದ ಬೇರೆಲ್ಲೂ ಕಾಣ ಸಿಗದ ಹಳೆಯ ಸಂಪ್ರದಾಯಗಳನ್ನು ಪ್ರತಿನಿಧಿಸಿ ಶಾಂತಿ ಮತ್ತು ಸೌಹಾರ್ದತೆಯ ಸಂದೇಶವನ್ನು ನೀಡುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ನೇಮೋತ್ಸವದಲ್ಲಿ ನಡೆಯುವ ಅತ್ಯಂತ ಅಪರೂಪದ ಆಚರಣೆಯೇ "ಉಳ್ಳಾಕುಲು ದೈವದ " ಅಡ್ಡಣಪೆಟ್ಟು . ಹೌದು, ಪ್ರತಿಯೊಂದು ಪ್ರದೇಶವೂ ತನ್ನದೇ ಆದ ವಿವಿಧ ಆಯಾಮಗಳ...

ನಿಡ್ವಾಳ ಬ್ರಹ್ಮಕಲಶೋತ್ಸವ – ಸಭಾ ಕಾರ್ಯಕ್ರಮ ;  ಸನಾತನ ಧರ್ಮದ ಆಳ ಎಷ್ಟಿದೇ ಎನ್ನುವುದಕ್ಕೆ ನಿಡ್ವಾಳವೇ ಒಳ್ಳೆಯ ನಿದರ್ಶನ – ಭಗವಂತ ಇಚ್ಛಿಸಿದ್ದು ಮಾತ್ರ ನಡೆಯುತ್ತದೆ – ಪ್ರಸಾದ್ ಮುನಿಯಂಗಳ; ಎಲ್ಲರ ಸಹಕಾರದಿಂದ ಕ್ಷೇತ್ರಕ್ಕೆ ಶಕ್ತಿ ಬಂದಿದೆ – ಭಾಗೀರಥಿ ಮುರುಳ್ಯ

ಸನಾತನ ಧರ್ಮದ ಆಳ ಎಷ್ಟಿದೇ ಎನ್ನುವುದಕ್ಕೆ ನಿಡ್ವಾಳವೇ ಒಳ್ಳೆಯ ನಿದರ್ಶನ ಎಂದು ದೇಗುಲದ ವಾಸ್ತುಶಿಲ್ಪಿ ಎಸ್.ಎಂ. ಪ್ರಸಾದ್ ಮುನಿಯಂಗಳ ಹೇಳಿದರು. ಅವರು ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಪುನರ್ ನಿರ್ಮಾಣ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಏ.25 ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಹಲವು ವರ್ಷಗಳ ಕಾಲ ಚೊಕ್ಕಾಡಿಯಲ್ಲಿ ರಾಮನಾಗಿ...

ಕೆ.ಯು.ಡ.ಬ್ಲ್ಯೂ.ಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆ.ಯು.ಡ.ಬ್ಲ್ಯೂ.ಜೆ )ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಯ ಅಂಕ ಪಟ್ಟಿಯ ನಕಲನ್ನು ಶಾಲಾ/ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಿರಬೇಕು. ಸಂಘದ ಸದಸ್ಯರ ಆಧಾರ್ ಮತ್ತು ವಿದ್ಯಾರ್ಥಿಯ ಆಧಾರ್ ಜೆರಾಕ್ಸ್ ಮತ್ತು ಸಂಘದ ಐಡಿ ಕಾರ್ಡ್(ಕಡ್ಡಾಯ) ಜೆರಾಕ್ಸ್ ಹಾಗೂ ವಿದ್ಯಾರ್ಥಿಯ...

ಏ.27ರಂದು ಗ್ಯಾಸ್ ವ್ಯತ್ಯಯ ಖಂಡಿಸಿ ಸುಳ್ಯದಲ್ಲಿ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆ

ಯುವ ಕಾಂಗ್ರೆಸ್ ಸಮಿತಿ ಸುಳ್ಯ ಬ್ಲಾಕ್, ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ, ಯುವ ಕಾಂಗ್ರೆಸ್ ಸಮಿತಿ ಸುಳ್ಯ ವಿಧಾನಸಭಾ ಕ್ಷೇತ್ರ, ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ಸುಳ್ಯ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ಸಿನ ಎಲ್ಲಾ ಘಟಕಗಳ ಸಹಯೋಗದೊಂದಿಗೆ ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಹಾಗೂ ಎಲ್.ಪಿ.ಜಿ ಮತ್ತು ಸಿ.ಎನ್.ಜಿ ಗ್ಯಾಸ್ ಪೂರೈಕೆ ವ್ಯತ್ಯಯ‌...
error: Content is protected !!