- Sunday
- June 14th, 2026
ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ)ಯ ಸುತ್ತೋಲೆ ಪ್ರಕಾರ ಪ್ರಥಮ ಪಿಯುಸಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಮೆ.08 ಕೊನೆ ದಿನಾಂಕವಾಗಿದೆ. ಮೆ.09ರಂದು ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಮೇ.14ರಂದು ವಿದ್ಯಾರ್ಥಿಗಳ ಪ್ರಥಮ ಪಟ್ಟಿ ಪ್ರಕಟಿಸಲಾಗುವುದು ಎಂದು ದ.ಕ ಜಿಲ್ಲಾ ಅನುದಾನಿತ ಉಪನ್ಯಾಸಕರ ಸಂಘದ ಅಧ್ಯಕ್ಷ ಮತ್ತು ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸೋಮಶೇಖರ್ ನಾಯಕ್...
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭವು ಏ.26 ರಂದು ಮಾಣಿಲ ಆ.ಹಿ ಪ್ರಾಥಮಿಕ ಶಾಲೆ ಮುರುವ ಇಲ್ಲಿ ನಡೆಯಿತು.ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಸಾಧಕರಿಗೆ ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ಮಾಣಿಲ ಸರಕಾರಿ ಪ್ರೌಢ ಶಾಲೆಯ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಇದರ ಆಶ್ರಯದಲ್ಲಿ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ಸಹಕಾರದೊಂದಿಗೆ “ಬೇಸಿಗೆ ಶಿಬಿರ-2026” ಮೇ.04ರಿಂದ ಮೇ.11ರ ವರೆಗೆ ಬೆಳಿಗ್ಗೆ 9:00ರಿಂದ ಅಪರಾಹ್ನ 1:00 ರವರೆಗೆ ಬೆಳ್ಳಾರೆಯ...
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ ಮಾಧವ ಅವರು ಇಂದು(ಏ.29) ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಮೃತಪಟಿರುವುದಾಗಿ ತಿಳಿದು ಬಂದಿದ್ದು, ಮೃತರು ಕಾಣಿಯೂರಿನವರಾಗಿದ್ದು, ಕಳೆದ ಒಂದು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದರು. ಮೃತರು ಪತ್ನಿ, ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.
ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ಮಹಾವಿಷ್ಣು ದೇವರ ಪುನರ್ ನಿರ್ಮಾಣ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಸಂಭ್ರಮದಿಂದ ಜರುಗುತ್ತಿದ್ದು, ಇಂದು ಬೆಳಿಗ್ಗೆ ಶ್ರೀ ಮಹಾವಿಷ್ಣು ದೇವರು ಹಾಗೂ ಶ್ರೀ ಮಹಾಗಣಪತಿ ದೇವರ ಪುನ: ಪ್ರತಿಷ್ಠೆ, ಪ್ರತಿಷ್ಠಾ ಪೂಜೆ, ಶಿಖರ ಪ್ರತಿಷ್ಠೆಯು ನಡೆಯಿತು. ದೇವಸ್ಥಾನದಲ್ಲಿ ಬೆಳಿಗ್ಗೆ ಮಹಾಗಣಪತಿ ಹೋಮ,ಅಂಕುರಪೂಜೆ ನಡೆದು ಶ್ರೀ ಮಹಾವಿಷ್ಣು ದೇವರ ಪುನ:...
ಸುಳ್ಯ: ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ...
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡಬಿದ್ರೆ ಸಾಂಸ್ಕೃತಿಕ ಯೋಜನೆ ಉಚಿತ ಶಿಕ್ಷಣ ಯೋಗಾಸನ ಆಯ್ಕೆ ಪ್ರಕ್ರಿಯೆ ಎಪ್ರಿಲ್ 20, 21, 22ರಂದು ನಡೆಯಿತು. ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಸುಳ್ಯ ಇಲ್ಲಿನ 5ನೇ ತರಗತಿ ವಿದ್ಯಾರ್ಥಿ, ಸುಳ್ಯ ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಸಂತೋಷ್ ಮುಂಡಕಜೆ ಹಾಗೂ ಪ್ರಶ್ವಿಜಾ ಸಂತೋಷ್ ಅವರ ಶಿಷ್ಯ ಆಶ್ರೀತ್ ಎ.ಸಿ ಆಳ್ವಾಸ್...
ಕಾನೂನು ಬಾಹಿರ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವು ಗೊಳಿಸುವಂತೆ ಆಗ್ರಹಿಸಿ ಬಿ.ಸಿ. ರೋಡ್ ನಾರಾಯಣ ಗುರು ವೃತ್ತದಿಂದ ಟೋಲ್ ಗೇಟ್ ವರೆಗೆ ಬೃಹತ್ ಜನಾಂದೋಲನ ನಡಿಗೆಯು ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಜರುಗಿತು. ಈ ನಡಿಗೆಯಲ್ಲಿ ಸುಳ್ಯದ ನಾಯಕರುಗಳು, ಕಾರ್ಯಕರ್ತರು ಭಾಗವಹಿಸಿದರು. ಮಾಜಿ ಸಚಿವ ರಮಾನಾಥ...
ಜಟ್ಟಿಪಳ್ಳ ವಸಂತಕಟ್ಟೆ ಬಳಿ, ರಾಮ ಎಂಬವರ ಮನೆ ಹತ್ತಿರ ವಿದ್ಯುತ್ ಲೈನ್ ಮೇಲೆ ಬಳ್ಳಿ ಹಬ್ಬಿದ್ದು, ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು, ಮಳೆಗಾಲಕ್ಕೆ ಮುನ್ನ ಇದನ್ನು ತೆರವುಗೊಳಿಸಬೇಕಾಗಿದೆ. ಈ ಬಗ್ಗೆ ಮೆಸ್ಕಾಂ ಕೂಡಲೇ ಕ್ರಮ ಕೈಗೊಂಡು ಸಂಭಾವ್ಯ ಅಪಾಯ ತಪ್ಪಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ದಿನಾಂಕ : 29 ಏಪ್ರಿಲ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
Loading posts...
All posts loaded
No more posts
