ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ 8ನೇ ಸ್ಥಾನ ಪಡೆದ ಶ್ರೀವಿದ್ಯಾ ಜೆಡ್ಡು ರವರಿಗೆ ಸನ್ಮಾನ

ಪೆರ್ನಾಜೆ : ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಬಂಟ್ವಾಳ ತಾಲೂಕಿನ ಬಸವನಗುಡಿಯ ನಿವಾಸಿ ಶ್ರಿವಿದ್ಯಾ ಜೆಡ್ಡು ಅವರಿಗೆ ಶ್ರೀ ಗೋಪಾಲಕೃಷ್ಣ ಸಭಾಭವನ ಮುಡಿಪಿನಲ್ಲಿ ಪಟಿಕ್ಕಲ್ ಕೃಷ್ಣಪ್ರಸಾದ್ ಅವರ ಮಗ ಚಿನ್ಮಯ ರಾಮ್ ಅವನ ಉಪನಯನ ಸಂದರ್ಭದಲ್ಲಿ ಶ್ರೀವಿದ್ಯಾ ಜೆಡ್ಡು ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 8ನೇ...

ಗುತ್ತಿಗಾರು : “ಕೂಡಿ ಆಡೋಣ ಬಾರ” ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ-ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಪಯಸ್ವಿನಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ(ರಿ.) ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್...
Ad Widget

ಸುಳ್ಯ ಗೌಡರ ಯುವ ಸೇವಾ ಸಂಘದಿಂದ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.96 ಅಂಕ ಗಳಿಸಿದ ಜೀವಿತಾ ಮೋಟ್ನೂರು ಅವರಿಗೆ ಅಭಿನಂದನೆ

ಗೌಡರ ಯುವ ಸೇವಾ ಸಂಘ(ರಿ.) ಸುಳ್ಯ, ಗೌಡ ಸಮುದಾಯ ಭವನ ನಿರ್ವಹಣಾ ಸಮಿತಿ, ಮಹಿಳಾ ಘಟಕ, ತರುಣ ಘಟಕ, ನಗರ ಹಾಗೂ ಗ್ರಾಮ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಮೇ.23 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ| ರೇಣುಕಾ ಪ್ರಸಾದ್ ಕೆ.ವಿ ಮತ್ತು ಮನೆಯವರು ಕೊಡುಗೆ ನೀಡಿದ...

ನಿಧನ : ಚಂದ್ರಾವತಿ ಅಂಬೆಕಲ್ಲು

ದೇವಚಳ್ಳ ಗ್ರಾಮದ ಅಂಬೆಕಲ್ಲು ದಿ.ರಾಮಣ್ಣ ಗೌಡರ ಪತ್ನಿ ಚಂದ್ರಾವತಿ ಅಂಬೆಕಲ್ಲು ಇವರು ವಯೋಸಹಜ ಅನಾರೋಗ್ಯದಿಂದ ಮೇ.27 ರಂದು ನಿಧನರಾದರು. ಮೃತರಿಗೆ 82 ವರ್ಷ ವಯಸ್ಸಾಗಿತ್ತು.ಮೃತರು ಮಕ್ಕಳಾದ ಜಯರಾಮ್ ಅಂಬೆಕಲ್ಲು, ಮನಮೋಹನ್ ಅಂಬೆಕಲ್ಲು, ಕಲಾವತಿ ಮಂಡೆಕೋಲು ಹಾಗೂ ಮೊಮ್ಮಕ್ಕಳು, ಮರಿಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ಇಂದಿನ(ಮೇ 29) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಭರ್ಜರಿ ಚೇತರಿಕೆ ; ಅಡಿಕೆ, ಕೊಬ್ಬರಿ, ಕಾಳುಮೆಣಸು ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 29 ಮೇ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...

ಪೆರುವಾಜೆ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶ ಅರವಿಂದ್ ಭೇಟಿ – ವಿಶೇಷ ಪೂಜೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶರಾದ ಅರವಿಂದ್ ರವರು ಮೇ.28 ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುನೀಲ್ ಕುಮಾರ್ ರೈ ಪೆರುವಾಜೆಗುತ್ತು, ಸದಸ್ಯರಾದ ದೀಪಕ್ ಶೆಟ್ಟಿ, ಶ್ರೀಮತಿ ನಿರ್ಮಲಾ ರೈ, ಪ್ರೀತಮ್ ರೈ, ಬೆಳ್ಳಾರೆ...

ಆಲ್ ಇಂಡಿಯಾ ಪೊಲೀಸ್ ಗೇಮ್ಸ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ – ಕಂಚಿನ ಪದಕ ಗೆದ್ದ ಸುಳ್ಯದ ಸುಚಿನ್ ಕುಮಾರ್

ಹರಿಯಾಣ ರಾಜ್ಯದ ಕರ್ನಾಲ್ ಜಿಲ್ಲೆಯ ಮಧುಬನದಲ್ಲಿ ನಡೆದ 2026-27ನೇ ಸಾಲಿನ ಆಲ್ ಇಂಡಿಯಾ ಪೊಲೀಸ್ ಗೇಮ್ಸ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯದ ಯುವಕ ಗಮನಾರ್ಹ ಸಾಧನೆ ಮಾಡಿ ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ. 88 ಕೆ. ಜಿ ವಿಭಾಗದಲ್ಲಿ ಕರ್ನಾಟಕ ಪೊಲೀಸ್ ತಂಡವನ್ನು ಪ್ರತಿನಿಧಿಸಿದ ಸುಳ್ಯದ ಸುಚಿನ್ ಕುಮಾರ್ ಕಂಚಿನ ಪದಕ ಗೆದ್ದು...

ಗುತ್ತಿಗಾರು : ಕಾಂಪ್ಲೆಕ್ಸ್ ನ ಬಾಡಿಗೆ ರೂಂ ನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ

ಸುಳ್ಯ ತಾಲೂಕಿನ ಗುತ್ತಿಗಾರಿನ ಕಾಂಪ್ಲೆಕ್ಸ್  ನ ಬಾಡಿಗೆ ಕೊಠಡಿಯೊಂದರಲ್ಲಿ  ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಇದೀಗ ವರದಿಯಾಗಿದ್ದು, ಗುತ್ತಿಗಾರು ಕೆಳಗಿನ ಪೇಟೆಯ ಕರುವಾಜೆ ಕಾಂಪ್ಲೆಕ್ಸ್ ನ ಮೇಲ್ಬಾಗದಲ್ಲಿರುವ ಬಾಡಿಗೆ ರೂಂ ಟ್ಯಾಪಿಂಗ್ ಕಾರ್ಮಿಕನ  ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿರಬೇಕು ಎಂದು ಅಂದಾಜಿಸಲಾಗಿದ್ದು, ಕಾಂಪ್ಲೆಕ್ಸ್...

ಪಂಜ : ಬಾಲಾಜಿ ಮಾರ್ಟ್ ನಲ್ಲಿ ನೋಟ್ ಬುಕ್ ಗಳಿಗೆ 25% ವರೆಗೆ ಡಿಸ್ಕೌಂಟ್

ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಪಂಜ ಬಾಲಾಜಿ ಮಾರ್ಟ್ ನಲ್ಲಿ ನೋಟ್ ಬುಕ್ ಹಾಗೂ ಸ್ಟೇಷನರಿ ವಸ್ತುಗಳ ಮೇಲೆ 10 ರಿಂದ 25% ವರೆಗೆ ಡಿಸ್ಕೌಂಟ್ ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

ಗುತ್ತಿಗಾರು : ಎಸ್.ಆರ್.ಬಿ. ಕೆಫೆ ಶುಭಾರಂಭ – ದೀಪ ಬೆಳಗಿಸಿ ಉದ್ಘಾಟಿಸಿದ ಹಿರಿಯ ವೈದ್ಯ ಡಾ. ಚಂದ್ರಶೇಖರ ಕಿರಿಭಾಗ

(ಫೋಟೋ : ಪ್ರಕೃತಿ ಗುತ್ತಿಗಾರು) ಗುತ್ತಿಗಾರಿನ ರಾಘವೇಂದ್ರ ಕಾಂಪ್ಲೆಕ್ಸ್ ನಲ್ಲಿ ಎಸ್.ಆರ್.ಬಿ. ಕೆಫೆ ಇಂದು ಶುಭಾರಂಭಗೊಂಡಿತು. ಹಿರಿಯ ವೈದ್ಯರಾದ ಡಾ. ಚಂದ್ರಶೇಖರ ಕಿರಿಭಾಗ ಅವರು ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿ ಎಸ್. ಆರ್.ಬಿ. ಕೆಫೆ ಉದ್ಘಾಟಿಸಿದರು.‌ ಈ ಸಂದರ್ಭದಲ್ಲಿ ಪ್ರಮುಖರಾದ ಮುಳಿಯ ತಿಮ್ಮಪ್ಪಯ್ಯ, ಬಿ.ಕೆ.ಬೆಳ್ಯಪ್ಪ ಗೌಡ, ಮುಳಿಯ ಕೇಶವ ಭಟ್, ಭರತ್ ಮುಂಡೋಡಿ, ಮಿತ್ರದೇವ ಮಡಪ್ಪಾಡಿ,...
Loading posts...

All posts loaded

No more posts

error: Content is protected !!