ಕಾಯರ್ತೋಡಿ ರಸ್ತೆ ಕಾಂಕ್ರೀಟೀಕರಣ ಉದ್ಘಾಟನೆ|ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ತರಲು ಪ್ರಯತ್ನ: ಭಾಗೀರಥಿ ಮುರುಳ್ಯ

ಸುಳ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಲಾಗುವುದು ಎಂದು ಸುಳ್ಯದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ಹೇಳಿದರು.ಶಾಸಕರ ಅನುದಾನದ 20 ಲಕ್ಷ ರೂ. ಹಾಗೂ ಸ್ಥಳೀಯ ನಗರ ಪಂಚಾಯತ್ನ ನಿಕಟಪೂರ್ವ ಸದಸ್ಯೆ ಪ್ರವಿತಾ ಪ್ರಶಾಂತ್ ಅವರ 4 ಲಕ್ಷ ರೂ. ಸಹಾಯಧನದಲ್ಲಿ ನಿರ್ಮಿಸಲಾದ ಕಾಯರ್ತೋಡಿ ದೇವಸ್ಥಾನದ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು ಉದ್ಘಾಟಿಸಿ ಅವರು...

ಹರಿಹರ ಪಳ್ಳತ್ತಡ್ಕ : ಸಚಿನ್ ಕ್ರೀಡಾ ಸಂಘದ ಸಾರಥ್ಯದಲ್ಲಿ ನಿವೃತ್ತ ಯೋಧರಾದ ಭಾಸ್ಕರ ಕೇಮಟಿ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಶೈಕ್ಷಣಿಕ ಸಾಧಕಿ ಕು.ಆಶಿಕಾ ಮುಂಡಾಜೆ ರವರಿಗೆ ಸನ್ಮಾನ ಸಮಾರಂಭ

ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಇವರ ಸಾರಥ್ಯದಲ್ಲಿ ಜೂ.13 ಶನಿವಾರದಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ನಿವೃತ್ತ ಯೋಧರಾದ ಭಾಸ್ಕರ ಕೇಮಟಿ ರವರಿಗೆ ಅಭಿನಂದನಾ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.99 ಅಂಕ ಗಳಿಸಿ ರಾಜ್ಯಕ್ಕೆ 5ನೇ ಸ್ಥಾನ ಪಡೆದ ಕು.ಆಶಿಕಾ ಮುಂಡಾಜೆ ರವರಿಗೆ ಸನ್ಮಾನ ಸಮಾರಂಭ ನಡೆಯಿತು.ಬೆಳಿಗ್ಗೆ ಹರಿಹರ...
Ad Widget

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಾಗರ : 50 ಸಾವಿರಕ್ಕೂ ಅಧಿಕ ಭಕ್ತರ ಆಗಮನ – ಪಾರ್ಕಿಂಗ್ ಅವ್ಯವಸ್ಥೆಗೆ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹ

ಸುಬ್ರಹ್ಮಣ್ಯ, ಜೂನ್ 14 : ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರವಿವಾರ 50 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿದ್ದು, ಕ್ಷೇತ್ರದಲ್ಲಿ ಭಕ್ತರ ಸಾಗರವೇ ಹರಿದು ಬಂದ ದೃಶ್ಯ ಕಂಡುಬಂತು. ಮಿಥುನ ಮಾಸ ಆರಂಭಗೊಂಡಿರುವುದು ಹಾಗೂ ಈ ವರ್ಷ ಮಳೆ ಪ್ರಮಾಣ ಕಡಿಮೆಯಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ...

ಗುತ್ತಿಗಾರು : ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು‌. ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷರಾದ ಪ್ರವೀಣ್ ಮುಂಡೋಡಿ ಇವರು ಉದ್ಘಾಟಿಸಿ ಶುಭಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಚೆನ್ನಮ್ಮ.ಪಿ ವಹಿಸಿದ್ದರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ತಾಡಿ, ಸದಸ್ಯರುಗಳಾದ ಅಚ್ಚುತ ಮಲ್ಕಜೆ,...

ಸುಳ್ಯ : ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಜೆ.ಸಿ.ಐ ಸುಳ್ಯ ಸಿಟಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಘಟಕ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು, ಜಂ ಇಯ್ಯತುಲ್ ಫಲಾಹ್(ರಿ.) ಸುಳ್ಯ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ದ.ಕ ಜಿಲ್ಲೆ, ಲಯನ್ಸ್ ಕ್ಲಬ್ ಹಿರಿಯಡ್ಕ, ಡಿಸ್ಟಿಕ್ 317ಸಿ, ರಿಜಿನ್ VI, ಜೋನ್ III...

ಬಂಗ್ಲೆಗುಡ್ಡೆ : ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇ.ವಿ.ಎಂ ಮೂಲಕ ವಿದ್ಯಾರ್ಥಿಗಳ ಚುನಾವಣೆ – ಶಾಲಾ ನಾಯಕಿಯಾಗಿ ಸಮೀಕ್ಷಾ ಜೆ.ವೈ ; ಉಪಮುಖ್ಯಮಂತ್ರಿಯಾಗಿ ಲೋಚನ್ ಪಿ.ಎಂ ಆಯ್ಕೆ

ಕೊಲ್ಲಮೊಗ್ರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಸಂಘ ರಚಿಸಲಾಯಿತು. ಚುನಾವಣಾ ದಿನಾಂಕ ಘೋಷಣೆ, ನಾಮಪತ್ರ ಸಲ್ಲಿಕೆ, ಚುನಾವಣಾ ಪ್ರಚಾರ, ತಮ್ಮ ಇಡೀ ಕಾರ್ಯಕ್ರಮವನ್ನು ಮತದಾನ ಗುರುತಿನ ಚೀಟಿಯಾಗಿ ಬದಲಿಸಿ, ಮೊಬೈಲ್ ಇ.ವಿ.ಎಂನಲ್ಲಿ ಮತದಾನ, ಮತ ಎಣಿಕೆ ಹೀಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ತಂತ್ರಜ್ಞಾನವನ್ನು ಬಳಿಸಿಕೊಂಡು ಮಂತ್ರಿ ಮಂಡಲವನ್ನು...

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನದಲ್ಲಿ ಸಾನ್ವಿ ಎನ್. ಗೆ ಹೆಚ್ಚುವರಿ ಐದು ಅಂಕ

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 598 ಅಂಕ ಪಡೆದುಕೊಂಡಿದ್ದ ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎನ್. ಮರು ಮೌಲ್ಯ ಮಾಪನದಲ್ಲಿ ಐದು ಅಂಕ ಹೆಚ್ಚಾಗಿ ಪಡೆದು 603 ಅಂಕ ಪಡೆದಕೊಂಡಿದ್ದಾಳೆ.ಪಿ.ಯು.ಸಿ ವಿದ್ಯಾಭ್ಯಾಸಕ್ಕೆ ಮುಡಿಪಿನ ನವೋದಯ ವಸತಿ ಶಾಲೆಗೆ ಆಯ್ಕೆಯಾಗಿರುವ ಇವಳು ಸುಳ್ಯದ ಕೇರ್ಪಳ ನಾರಾಯಣ ಶಿಲ್ಪಿ ಹಾಗೂ ವಿಮಲ...

ಬೆಳ್ಳಾರೆ: ಬೂಡು-ಉಪ್ಪಂಗಳ-ಪಾಠಾಜೆ ಕಾಂಕ್ರಿಟೀಕೃತ ರಸ್ತೆ ಸಂಚಾರಕ್ಕೆ ಮುಕ್ತ

ಬೆಳ್ಳಾರೆ ಗ್ರಾಮದ ಉಮಿಕ್ಕಳ  ವಾರ್ಡ್ ಸಂಖ್ಯೆ 143ರ ಬೂಡು-ಉಪ್ಪಂಗಳ-ಪಾಠಾಜೆಯನ್ನು ಸಂಪರ್ಕಿಸುವ  ಕಾಂಕ್ರಿಟೀಕಣಗೊಂಡ ರಸ್ತೆಯನ್ನು ಜೂ. 12ರಂದು ಬೆಳಿಗ್ಗೆ 7 ಘಂಟೆಗೆ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.ಸುಮಾರು 14 ವರುಷಗಳಿಂದ ಇದು ಮರು ಡಾಮರೀಕರಣಗೊಳ್ಳದೆ ಸಂಚಾರ ದುಸ್ತರವಾಗಿತ್ತು. ಈ ವಾರ್ಡಿನ ನಿವಾಸಿಗಳು ಸಂಬಂಧಪಟ್ಟವರಲ್ಲಿ ಹಲವು ವರುಷಗಳಿಂದ ತಮ್ಮ ಅಹವಾಲನ್ನು ಮಂಡಿಸುತ್ತಿದ್ದರು.ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಜೂ.08)ದಿಂದ ಶನಿವಾರ(ಜೂ.13)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ರಬ್ಬರ್ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆ

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 08 ಸೋಮವಾರದಿಂದ ಜೂನ್ 13...

ಜನನ್ಯ ಸಿ.‌ ನವೋದಯ ವಿದ್ಯಾಲಯಕ್ಕೆ ಆಯ್ಕೆ

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಜನನ್ಯ ಸಿ. ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದು, ಗುತ್ತಿಗಾರಿನ ಅರಿವು ಕೇಂದ್ರದಲ್ಲಿ ಪರೀಕ್ಷೆಯ ತರಬೇತಿ ಪಡೆದಿರುತ್ತಾಳೆ.ಈಕೆ ಕೊಲ್ಲಮೊಗ್ರ ಗ್ರಾಮದ ಚಾಂತಾಳ ನವ್ಯ ಚಿದಾನಂದ ರವರ ಪುತ್ರಿ.
Loading posts...

All posts loaded

No more posts

error: Content is protected !!