- Wednesday
- August 12th, 2026
ಸುಳ್ಯ, ಜೂನ್ 27: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ.) ವತಿಯಿಂದ ಜುಲೈ 7ರಂದು (ಮಂಗಳವಾರ) ಬೆಳಿಗ್ಗೆ 10 ಗಂಟೆಯಿಂದ ಅಂಬಟೆಡ್ಕದ ಕನ್ನಡ ಭವನದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ಉದ್ಘಾಟಿಸಲಿದ್ದು, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್...
ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮವು ಜೂ.27ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಜಯಾನಂದ ಪಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸಿಐ 15 ವಲಯ ಅಧ್ಯಕ್ಷ ಜೆಎಫ್ಎಸ್ ಸಂತೋಷ್ ಶೆಟ್ಟಿ ಆಗಮಿಸಿದ್ದರು.ಅತಿಥಿಗಳಾಗಿ ಜೇಸಿಐ ವಲಯ- 15 ನೇತ್ರಾವತಿ (ರಿಜನ್ -ಬಿ)...
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವ ಯು.ಟಿ. ಖಾದರ್ ಅವರಿಗೆ ಜು. 6ರಂದು ಸುಳ್ಯದ ಜಾನಕಿ ವೆಂಕಟ್ರಮಣ ಸಭಾಭವನದಲ್ಲಿ ಸುಳ್ಯ ತಾಲೂಕಿನ ಸಾರ್ವಜನಿಕರ ಪರವಾಗಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದರು. ಅವರು ಸುಳ್ಯದ ಪತ್ರಿಕಾಭವನದಲ್ಲಿ ಜೂ. 27ರಂದು...
ರಾಜ್ಯದಲ್ಲಿರುವ ಸರಕಾರಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸಿ ಟಾಟಾ ಪವರ್ ಕಂಪನಿಗೆ ಲೈಸನ್ಸ್ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದ ಸುಳ್ಯ ತಾಲೂಕು ಘಟಕ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದೆ.ಖಾಸಗೀಕರಣದಿಂದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತದೆ. ಸರಕಾರದಿಂದ ರೈತರು ಹಾಗೂ ಗ್ರಾಹಕರಿಗೆ ಸಿಗುವ ವಿವಿಧ ಸೌಲಭ್ಯಗಳು ಕಡಿತಗೊಳ್ಳುವ ಸಾಧ್ಯತೆಯಿದೆ. ಆದುದರಿಂದ ಲಾಭದಲ್ಲಿ ಇರುವ ಮೆಸ್ಕಾಂ...
ಸುಳ್ಯ: ರೋಟರಿ ಕ್ಲಬ್ ಸುಳ್ಯದ 2026-27ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಜು. 1ರಂದು ಸುಳ್ಯದ ರೋಟರಿ ಕಮ್ಯೂನಿಟಿ ಹಾಲ್ನಲ್ಲಿ ನಡೆಯಲಿದೆ ಎಂದು ನೂತನ ಅಧ್ಯಕ್ಷೆ ಲತಾ ಮಧುಸೂಧನ್ ತಿಳಿಸಿದರು. ಅವರು ಸುಳ್ಯದ ಪತ್ರಿಕಾ ಭವನದಲ್ಲಿ ಜೂ. 27ರಂದು ರೋಟರಿ ಕ್ಲಬ್ ಸುಳ್ಯ ಇದರ ವತಿಯಿಂದ ನಡೆದ ಪತ್ರಿಕಾಗೋಷ್ಟಿ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ಕ್ಯಾನ್ಸರ್ ರೋಗಿಗೆ ಧನಸಹಾಯ...
ದಿನಾಂಕ : 27 ಜೂನ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾನೂನು ಪ್ರಕೋಷ್ಠದ ಸದಸ್ಯರಾಗಿ ಸಂದೀಪ್ ವಳಲಂಬೆ ಆಯ್ಕೆಯಾಗಿದ್ದಾರೆ. ಹಾಗೂ ಸುಳ್ಯ ಮಂಡಲದ ಕಾನೂನು ಪ್ರಕೋಷ್ಠದ ಸಹಸಂಚಾಲಕರಾಗಿ ಸಂದೀಪ್ ಮದುವೆಗದ್ದೆ ಆಯ್ಕೆಯಾಗಿದ್ದಾರೆ. ಜೂ.26 ರಂದು ಭಾರತೀಯ ಜನತಾ ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು.
“ಮಹಿಳೆ ಬಹುಮುಖ ಪ್ರತಿಭೆಯ ಪ್ರತೀಕವಾಗಿದ್ದು, ಆಕೆಯಲ್ಲಿರುವ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರಕೃತಿ ಮತ್ತು ಪುರುಷನನ್ನು ಸಮಾನತೆಯ ದೃಷ್ಟಿಯಿಂದ ಒಪ್ಪಿಕೊಳ್ಳಬೇಕು” ಎಂದು ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಗಂಗಾಧರ ಬೆಳ್ಳಾರೆ ಹೇಳಿದರು. ಅವರು ಬೆಳ್ಳಾರೆಯ ಸ್ನೇಹಶ್ರೀ ಮಹಿಳಾ ಮಂಡಲದ ದಶ ಸಂಭ್ರಮದ ಸವಿನೆನಪಿಗೆ ಹೊರತರಲಾದ ಸ್ನೇಹ ಪಥ ಸ್ಮರಣ ಸಂಚಿಕೆಯನ್ನು...
ಕಲ್ಮಡ್ಕ ಗ್ರಾಮದ ನಡ್ಕ ಎಂಬಲ್ಲಿ ಮಮತಾ ಎಂಬುವರ ಹಳೆಯ ಮನೆಗೆ ಜೂ. 27ರಂದು ಬೆಳಿಗ್ಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಬೆಳಿಗ್ಗೆ 6 ಗಂಟೆ ಸಮಯದಲ್ಲಿ ಬೆಂಕಿ ತಗುಲಿದ್ದು, ಅನಾಹುತ ಸ್ಥಳಕ್ಕೆ ತೆರಳಿದ್ದ ಸುಳ್ಯ ಅಗ್ನಿಶಾಮಕ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ಹಾಗೂ ಸ್ಥಳೀಯರ ಸಹಕಾರದಿಂದ ಮನೆಯಲ್ಲಿದ್ದ ಅಡಿಕೆ, ರಬ್ಬರ್, ಮತ್ತು ತೆಂಗಿನಕಾಯಿಯನ್ನು ಮನೆಯಿಂದ ಹೊರಗಡೆ...
ಸಮಸ್ತ ಶತಮಾನೋತ್ಸವದ ಅಂಗವಾಗಿ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್.ವೈ.ಎಸ್, ಎಸ್.ಎಸ್.ಎಫ್ ಗಾಂಧಿನಗರ ಯೂನಿಟ್ ವತಿಯಿಂದ ಜೂನ್ 26ರಂದು ಗಾಂಧಿನಗರದಲ್ಲಿ ಸಮಸ್ತ ಸ್ಥಾಪನಾ ದಿನ ಆಚರಿಸಲಾಯಿತು. ಸಯ್ಯಿದ್ ತ್ವಾಹಿರ್ ಸಅದಿ ತಂಙಳ್ ದುಆ ನೆರವೇರಿಸಿದರು. ಕೆ.ಎಂ.ಜೆ ಯುನಿಟ್ ಅಧ್ಯಕ್ಷರಾದ ಅಬೂಬಕ್ಕರ್ ಕೆ.ಎ. ಅಧ್ಯಕ್ಷತೆ ವಹಿಸಿದರು. ಸುಳ್ಯ ತಾಲೂಕು ಸುನ್ನಿ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸಖಾಫಿ...
Loading posts...
All posts loaded
No more posts
