ಬಾಳಿಲ : ವಿದ್ಯಾ ಬೋಧಿನೀ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ಬಾಳಿಲ ಜೂನ್ 06 : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಯಕ್ಷ ಶಿಕ್ಷಣ ನಾಟ್ಯ ತರಬೇತಿಯು ವಿದ್ಯಾ ಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಉದ್ಘಾಟನೆಗೊಂಡಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಜಿಲ್ಲೆಯಾದ್ಯಂತ ವಿವಿಧ ಶಾಲೆಗಳಲ್ಲಿ ಯಕ್ಷಗಾನ ನಾಟ್ಯ ತರಬೇತಿಯು ನಡೆದುಕೊಂಡು ಬರುತ್ತಿದೆ ಪ್ರಸ್ತುತ 2026-27ನೆಯ ಶೈಕ್ಷಣಿಕ ವರ್ಷದ ಯಕ್ಷ ಶಿಕ್ಷಣ ಉಚಿತ ನಾಟ್ಯ ತರಬೇತಿಗೆ ದೀಪ ಬೆಳಗಿಸಿ...

ಪೈಚಾರು : ನಿಲ್ಲಿಸಿದ್ದ ಲಾರಿಗೆ ಕಾರು ಢಿಕ್ಕಿ – ಇಬ್ಬರಿಗೆ ಗಾಯ

ಪೈಚಾರಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿ ಹಿಂಬದಿಯಿಂದ ಕಾರೊಂದು ಢಿಕ್ಕಿಯಾಗಿ ಇಬ್ಬರು ಪ್ರಯಾಣಿಕರಿಗೆ ಹೆಚ್ಚಿನ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮಗು ಅಪಾಯದಿಂದ ಪಾರಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.
Ad Widget

ಸುಳ್ಯ : ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭೋತ್ಸವ

ಸುಳ್ಯದ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 05 ರಂದು ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯಾಸಂಸ್ಥೆಯ ಸಂಚಾಲಕರಾದ ರೊ. ಪಿ.ಪಿ. ಎಂ.ಪಿ.ಹೆಚ್.ಎಫ್ ಪ್ರಭಾಕರನ್ ನಾಯರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶೋಭಾ ಬೊಮ್ಮೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ರೊ. ಮೇಜರ್ ಡೊನೊರ್ ಡಾ|| ರಾಮ್ ಮೋಹನ್...

ಸುಬ್ರಹ್ಮಣ್ಯ : ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸ್ವಚ್ಛತಾ ಅಭಿಯಾನ – “ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ ” : ರಾಜಶೇಖರ ಕೋಟ್ಯಾನ್

ಸುಬ್ರಹ್ಮಣ್ಯ ಜೂನ್ 07 : ದಿನನಿತ್ಯ ರಾಜ್ಯ ಹೊರ ರಾಜ್ಯಗಳಿಂದ ಸಾವಿರಾರು ಭಕ್ತಾದಿಗಳು ಕುಕ್ಕೆ ಕ್ಷೇತ್ರಕ್ಕೆ ಬಂದು ಶ್ರೀ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಹೋಗುತ್ತಾರೆ. ಆದರೆ ಬರುವಾಗ ಅಥವಾ ಹೋಗುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ, ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಮಾರ್ಗದ ಬದಿಯ ಚರಂಡಿಗೆ ಎಸೆದು ಹೋಗುವುದು...

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ನೂತನ ಸಮಿತಿ ಪದಗ್ರಹಣ ಹಾಗೂ ಬೈಲುವಾರಿ ಸಮಿತಿ ಸದಸ್ಯರ ಆಯ್ಕೆ

ಸುಳ್ಯ : ಇತ್ತೀಚೆಗೆ ನಡೆದ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಮಹಾಸಭೆಯಲ್ಲಿ ಆಯ್ಕೆಯಾದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮ ಹಾಗೂ ಉಪಸಮಿತಿಗಳ ರಚನಾ ಕಾರ್ಯಕ್ರಮವು ಭಾನುವಾರ ಸುಳ್ಯ ಕೇರ್ಪಳ ಸಂಧ್ಯಾರಶ್ಮಿ ಸಭಾಭವನದಲ್ಲಿ ನಡೆಯಿತು. ನೂತನ ಕಾರ್ಯಕಾರಿ ಸಮಿತಿ ಆಧ್ಯಕ್ಷ ಸುರೇಶ್ ಕರ್ಲಪ್ಪಾಡಿ ನೇತೃತ್ವದ ಸಮಿತಿಯಲ್ಲಿ ಕಾರ್ಯದರ್ಶಿ ಗೋಪಾಲಕೃಷ್ಣ ಮೊರಂಗಲ್ಲು, ಕೋಶಾಧಿಕಾರಿ ರಾಧಾಕೃಷ್ಣ ಬೇರ್ಪಡ್ಕ,...

3,395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ – ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ – ಜೂ.16ರಿಂದ ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ

ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ನೇರ ತರಗತಿ ಮತ್ತು ಆನ್ಲೈನ್...

ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪೆರಾಜೆಯ ಜ್ಯೋತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಅರಣ್ಯ ಸಂರಕ್ಷಕರು ಹಾಗೂ ಗೌರವ ವನ್ಯಜೀವಿ ವಾರ್ಡನ್ ಭುವನೇಶ್ವರ್ ಉಪಸ್ಥಿತರಿದ್ದು “ವನ್ಯಜೀವಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಮುಂದಿನ ಭವಿಷ್ಯಕ್ಕಾಗಿ ಪ್ರಕೃತಿಯನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಮತ್ತು ಎಲ್ಲಾ ವಿದ್ಯಾರ್ಥಿಗಳು ಇದರ ಕಡೆಗೆ ಹೆಚ್ಚು ಗಮನ ಹರಿಸಬೇಕು”...

ಸಂತೋಷ್ ಪಾಯಿಕ್ ನಿರ್ಮಾಣದ ಹಾಸ್ಯ ಚಲನಚಿತ್ರದ ಶೂಟಿಂಗ್ ಸೆಟ್ ನಲ್ಲಿ ಭೀಮರಾವ್ ವಾಷ್ಠರ್ ಜನ್ಮದಿನಾಚರಣೆ

ಚಿತ್ರ ನಿರ್ಮಾಪಕ ಸಂತೋಷ್.ವಿ ಪಾಯಿಕ್ ರವರ ಮ್ಯಾರೇಜ್ ಪಾರ್ಟಿ ಹಾಸ್ಯ ಚಲನಚಿತ್ರದ ಶೂಟಿಂಗ್ ಸೆಟ್ ನಲ್ಲಿ ಕವಿ, ಲೇಖಕ, ಜ್ಯೋತಿಷ್ಯರು ಹಾಗೂ ಈ ಚಲನಚಿತ್ರದ ಕಲಾವಿದರಾದ ಎಚ್.ಭೀಮರಾವ್ ವಾಷ್ಠರ್ ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ನಾಯಕ ನಟ ವಿನೀತ್ ಕುಮಾರ್, ನಟಿ ರಕ್ಷಿತಾ ಕಾರ್ಕಳ, ನಿರ್ಮಾಪಕ ಸಂತೋಷ್.ವಿ ಪಾಯಿಕ್, ಖ್ಯಾತ ಹಾಸ್ಯ ನಟರಾದ ದೀಪಕ್ ರೈ...

ಕುಕ್ಕೆ ಸುಬ್ರಹ್ಮಣ್ಯ : ನಿವೃತ್ತ ಗ್ರಂಥಪಾಲಕರಿಗೆ ಬೀಳ್ಕೊಡುಗೆ ಸಮಾರಂಭ – “ದೇವಳದ ವಿದ್ಯಾಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವುದು ಭಾಗ್ಯ” : ಹರೀಶ್ ಇಂಜಾಡಿ

ಸುಬ್ರಹ್ಮಣ್ಯ : “ಶ್ರೀ ದೇವಳದ ವಿದ್ಯಾಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ದೊರಕಿರುವ ಅವಕಾಶವು ದೇವರ ವರವಾಗಿದೆ. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ದೇವರ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದರೆ ದೇವರ ಆಶೀರ್ವಾದ ಸದಾ ಇರುತ್ತದೆ. ವಿದ್ಯಾರ್ಥಿಗಳ ಅನುಕೂಲತೆಗೆ ಮತ್ತು ಅವರ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸೇವೆ ಸಲ್ಲಿಸುವುದರಿಂದ ಮಕ್ಕಳ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗುತ್ತದೆ. ಕರ್ತವ್ಯ ನಿಷ್ಠೆಯು ಸದಾ ಗೌರವಕ್ಕೆ ಪ್ರಾಪ್ತವಾಗುತ್ತದೆ” ಎಂದು ಮಹತೋಭಾರ...

ಬಿಳಿನೆಲೆ : ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

ಬಿಳಿನೆಲೆ : “ಮಾನವರಿಗೂ,ಪ್ರಾಣಿ-ಪಕ್ಷಿಗಳಿಗೂ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧವಿದೆ. ಅಂತಹ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಮ್ಮ ಪರಿಸರ ಪ್ಲಾಸ್ಟಿಕ್ ಮುಕ್ತ ಪರಿಸರವಾಗಿರುವಂತೆ ನಾವೆಲ್ಲರೂ ಜಾಗೃತವಹಿಸೋಣ” ಎಂದು ಸುಬ್ರಹ್ಮಣ್ಯ ವಲಯದ ವಲಯ ಅರಣ್ಯಾಧಿಕಾರಿಗಳಾದ ಅಪೂರ್ವ ಆಚ್ರಪ್ಪಾಡಿ ಹೇಳಿದರು. ಇವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಇಕೋ ಕ್ಲಬ್ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ...
Loading posts...

All posts loaded

No more posts

error: Content is protected !!