ಐವರ್ನಾಡು: ಅಪಘಾತದ ಗಾಯಾಳು ಚಿಕಿತ್ಸೆ ಫಲಿಸದೇ ಮೃತ್ಯು

ಐವರ್ನಾಡಿನಲ್ಲಿ ಜೀಪು ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಜು. 8ರಂದು ನಡೆದಿದೆ. ಐವರ್ನಾಡಿನ ಪರ್ಲಿಕಜೆಯಲ್ಲಿ ಜು. 7ರಂದು ರಾತ್ರಿ ಜೀಪು ಬೈಕ್‌ ಡಿಕ್ಕಿಯಾಗಿ ಬೈಕ್ ಸವಾರ ಐವರ್ನಾಡು ಕೃಷಿ ಕಾಲನಿ ನಿವಾಸಿ ಚಂದ್ರಶೇಖರ (28) ಎಂಬವರು ಗಾಯಗೊಂಡಿದ್ದರು. ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು....

ಐವರ್ನಾಡು: ಸ್ಥಗಿತಗೊಂಡ ಕುಕ್ಕುಡೇಲು ರಸ್ತೆ ಹಾಗೂ ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳಿಗೆ ತಹಶೀಲ್ದಾರ್ ಭೇಟಿ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳಿಗೆ ಹಾಗೂ ಸ್ಥಗಿತಗೊಂಡ ರಸ್ತೆಯನ್ನು ಸುಳ್ಯ ತಹಶೀಲ್ದಾರ್ ಮಂಜುಳ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಿಡ್ಬ್ಲ್ಯೂಡಿ ಇಂಜಿನಿಯರ್ ಪರಮೇಶ್ವರ, ಕಂದಾಯ ಅಧಿಕಾರಿ ಅವಿನ್ ರಂಗತ್ ಮಲೆ, ಗ್ರಾ.ಪಂ.ಸಿಬ್ಬಂದಿಗಳು, ಗ್ರಾಮ ಸಹಾಯಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕುಕ್ಕುಡೇಲು ರಸ್ತೆಯಲ್ಲಿ ಕುಸಿದಿರುವ ಬರೆಯನ್ಮು ಮಳೆಗಾಲದ ಬಳಿಕ...
Ad Widget

ಸ್ಥಗಿತಗೊಂಡ ಸಿಎಲ್-2ಎ ಮದ್ಯದಂಗಡಿಗಳ ಸನ್ನದು ಮರುಹಂಚಿಕೆಗೆ ಇ-ಹರಾಜು; ಜು. 14ರಂದು ತರಬೇತಿ ಕಾರ್ಯಗಾರ

ಕರ್ನಾಟಕ ಸರ್ಕಾರವು ಸ್ಥಗಿತಗೊಂಡಿರುವ ಸಿಎಲ್-2ಎ ಮದ್ಯದಂಗಡಿಗಳ ಸನ್ನದುಗಳ ಮರುಹಂಚಿಕೆಗಾಗಿ ಇ-ಹರಾಜು (e-Auction) ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಸಂಬಂಧ ಆಸಕ್ತ ಬಿಡ್ ದಾರರ ಆನ್‌ಲೈನ್ ನೋಂದಣಿ ಜು. 3ರಿಂದ ಆರಂಭಗೊಂಡಿದೆ. ಇ-ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ನೋಂದಾಯಿತ ಬಿಡ್ ದಾರರು ಹಾಗೂ ಅಬಕಾರಿ ಇಲಾಖೆಯ ನೋಡಲ್ ಅಧಿಕಾರಿಗಳಿಗಾಗಿ ಜು. 14ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್...

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ವೈದ್ಯರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ,ವನಮಹೋತ್ಸವ ಆಚರಣೆ

ಬೆಳ್ಳಾರೆ ರೋಟರಿ ಕ್ಲಬ್ ವತಿಯಿಂದ ಜು. 7ರಂದು ಮೂರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ವೈದ್ಯರ ದಿನಾಚರಣೆ, ಪ್ರಕೃತಿ ಚಿಕಿತ್ಸೆ ಮಾಹಿತಿ ಕಾರ್ಯಗಾರ ಮತ್ತು ವನ ಮಹೋತ್ಸವ ಕಾರ್ಯಕ್ರಮವು ನಡೆಯಿತು.  ಹಾಸನಡ್ಕ ಆರೋಗ್ಯಧಾಮ ಕಜೆಮೂಲೆ, ಎಂಬಲ್ಲಿ  ರೋಟರಿ ಅಧ್ಯಕ್ಷ ಆರಿಫ್ ಬೆಳ್ಳಾರೆ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ‌ ನಡೆಯಿತು. ಆರೋಗ್ಯಕರ ಆಹಾರ ಪದ್ಧತಿ ಹಾಗೂ ಪ್ರಕೃತಿ ಚಿಕಿತ್ಸಾ ಮಾಹಿತಿಯನ್ನು ವೈದ್ಯ ಶಶಿಧರ್...

ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ – ನೂತನ ಪದಾಧಿಕಾರಿಗಳ ಆಯ್ಕೆ ; ಗೌರವಾಧ್ಯಕ್ಷರಾಗಿ ರಾಜೇಶನಾಥ ಸ್ವಾಮೀಜಿ, ಅಧ್ಯಕ್ಷ ಸತೀಶ್ ಕೆ.ಜಿ, ಕಾರ್ಯದರ್ಶಿ ವರ್ಷಿತ್ ಚೊಕ್ಕಾಡಿ, ಖಜಾಂಜಿ ನವೀನ್ ಎಲಿಮಲೆ

ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನಾಚರಣೆಯ ಅಂಗವಾಗಿ ವರ್ಷಂಪ್ರತಿ ಸುಳ್ಯದಲ್ಲಿ ‌ಆಯೋಜಿಸಲ್ಪಡುವ 13ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವ ಭಾವಿ ಸಭೆಯು ಜು.08 ರಂದು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು.  ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ರಾದ ಶ್ರೀಕಾಂತ್ ಗೋಳ್ವಾಲ್ಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ಸವ ಸಮಿತಿಯ...

ಮಲ್ಲಾರ : ಬಾರಡ್ಕದಲ್ಲಿ ಟೆಂಪೋ-ಬೈಕ್ ಅಪಘಾತ

ನಡುಗಲ್ಲು ಹರಿಹರಪಲ್ಲತ್ತಡ್ಕ ರಸ್ತೆಯ ಮಲ್ಲಾರ ಸಮೀಪದ ಬಾರಡ್ಕ ಚಡಾವಿನಲ್ಲಿ ಟೆಂಪೋ ಹಾಗೂ ಬೈಕ್ ಅಪಘಾತ ಸಂಭವಿಸಿದ ಘಟನೆ ಇದೀಗ ವರದಿಯಾಗಿದೆ. ಬೈಕ್ ಸವಾರಿಗೆ ಗಂಭೀರ ಗಾಯಗಳಾಗಿದ್ಸು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಇಂದಿನ(ಜುಲೈ 09) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಮಾರುಕಟ್ಟೆಯಲ್ಲಿ ಹ್ಯಾಟ್ರಿಕ್ ಜಿಗಿತ ; ಅಡಿಕೆ, ಕೊಬ್ಬರಿ ಮತ್ತು ಕಾಳುಮೆಣಸು ಸಂಪೂರ್ಣ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 09 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ನನ್ನ ಅನುಮತಿಯಿಲ್ಲದೆ ಆಸ್ತಿ ದಾಖಲೆಗಳ ದುರುಪಯೋಗ |ರಾಜಕೀಯ ಪ್ರಭಾವದಿಂದ ನನಗೆ ಮತ್ತು ಮಕ್ಕಳಿಗೆ  ಅನ್ಯಾಯ ಮಾಡಿದ್ದಾರೆ | ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ  ಟಿ.ಎಂ. ಶಹೀದ್ ತೆಕ್ಕಿಲ್ ವಿರುದ್ಧ ಪತ್ನಿ ಶಮಾ ಆರೋಪ

ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು ತನ್ನ ಅನುಮತಿಯಿಲ್ಲದೆ ಆಸ್ತಿ ಹಾಗೂ ದಾಖಲೆ ಪತ್ರಗಳಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದು, ಇದೀಗ ತಲಾಕ್ ನೀಡಿ ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಅವರ ಪತ್ನಿ ಶಮಾ ಅವರು ಆರೋಪಿಸಿದ್ದಾರೆ. ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಜು. 8ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 09-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷ ರಾಶಿ* ,ಕೆಲವು ಜನರು ಪೂರ್ವಜರ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದಗಳಲ್ಲಿ ಗೆಲ್ಲುತ್ತಾರೆ. ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾತಾವರಣ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ, ಗಮನಿಸಿ:-ಇಂದು ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಸೂಚನೆಗಳಿವೆ, ಪರಿಹಾರ:-ಸೂರ್ಯನಿಗೆ...

ಸುಬ್ರಹ್ಮಣ್ಯ ವಾಲ್ಮೀಕಿ ವಸತಿ ಶಾಲೆಗೆ ಕೊಡುಗೆ ಹಸ್ತಾಂತರ

ಸುಬ್ರಹ್ಮಣ್ಯ ಜುಲೈ.08 : ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಕುರ್ಚಿ ಹಾಗೂ ಟೀಪಾಯಿಗಳನ್ನು ಕೊಡುಗೆಯಾಗಿ ಮಂಗಳವಾರ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಡಾ. ಎ.ಎ ತಿಲಕ್...
Loading posts...

All posts loaded

No more posts

error: Content is protected !!