- Sunday
- September 20th, 2026
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ(ಆ.04) ಮಂಗಳೂರು ಉಪವಿಭಾಗದ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮುಲ್ಕಿ, ಉಳ್ಳಾಲದ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ...
ಬೆಳ್ಳಾರೆ ಗ್ರಾಮದ ನೆಟ್ಟಾರು ದೇವರಗುಂಡಿ ಸಂಪರ್ಕ ರಸ್ತೆಗೆ ನಾಲ್ಕು ದಿನಗಳ ಹಿಂದೆ ವಿದ್ಯುತ್ ಕಂಬವೊಂದು ಗಾಳಿ, ಮಳೆಗೆ ಅಡ್ಡಲಾಗಿ ಬಿದ್ದಿದ್ದು ಇಲ್ಲಿನ ಹಲವು ಮನೆಗಳವರು ನಾಲ್ಕು ದಿನಗಳಿಂದ ಕುಡಿಯುವ ನೀರು, ಸಂಚಾರ, ವಿದ್ಯುತ್ ಇಲ್ಲದೆ ಕತ್ತಲೆಯಲ್ಲಿದ್ದಾರೆ. ಸ್ಥಳೀಯ ಶಾಲೆ,ಮದರಸ ವಿದ್ಯಾರ್ಥಿ,ವಿದ್ಯಾರ್ಥಿನಿಗಳು,ಸಾರ್ವಜನಿಕರಿಗೆ ಸಂಚಾರ ಕಷ್ಟಕರವಾಗಿದೆ. ಸ್ಥಳೀಯರು ಬೆಳ್ಳಾರೆಯ ಮೆಸ್ಕಾಂ ಶಾಖಾ ಕಛೇರಿಗೆ ಈ ಕುರಿತು ದೂರು ನೀಡಿದ್ದರೂ...
ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ, ಆರ್ಥಿಕ ಪಾರದರ್ಶಕತೆ ಹಾಗೂ ಗುತ್ತಿಗೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಉಂಟಾಗಿರುವ ಗೊಂದಲಗಳಿಗೆ ಸ್ಪಷ್ಟನೆ ನೀಡಲು ಆಗಸ್ಟ್ 15ರಂದು ಸಾರ್ವಜನಿಕ ಸಭೆ ಕರೆಯುವಂತೆ ಆಗ್ರಹಿಸಿ ಭಕ್ತರು ಸೋಮವಾರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರು ಅವರಿಗೆ ಮನವಿ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯವೈಖರಿ, ಹಣಕಾಸಿನ...
ಹರಿಹರ ಪಳ್ಳತ್ತಡ್ಕ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ನೇತಾಜಿ ಯುವಕ ಮಂಡಲದ ಕಟ್ಟಡವು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಹಾನಿಗೊಳಗಾಗಿದೆ ಎಂದು ತಿಳಿದುಬಂದಿದ್ದು, ಕಟ್ಟಡದೊಳಗೆ ಸಚಿನ್ ಕ್ರೀಡಾ ಸಂಘದ ಕ್ರೀಡಾ ಪರಿಕರಗಳಿದ್ದು, ಅವುಗಳಿಗೂ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ. (ವರದಿ : ಉಲ್ಲಾಸ್ ಕಜ್ಜೋಡಿ)
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 03 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಬ್ರಹ್ಮಣ್ಯ, ಕಲ್ಲಾಜೆ ಮತ್ತು ಕುಲ್ಕುಂದ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದಿನಾಂಕ ಆ.02 ರಂದು ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ವಿಮಲಾ ರಂಗಯ್ಯರವರ ಅಧ್ಯಕ್ಷತೆಯಲ್ಲಿ...
ಆಟಿಯು ಬಡತನದ ದಿನಗಳನ್ನು ಸಂಭ್ರಮಿಸುವ ತಿಂಗಳು. ಯುವ ಸಮುದಾಯಕ್ಕೆ ಆಟಿ ತಿಂಗಳ ಮಹತ್ವವನ್ನು ತಿಳಿಸುವ ಕಾರ್ಯ ಮಾಡಬೇಕಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಕೇಂದ್ರ ಸಮಿತಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಹೇಳಿದರು. ಅವರು ಆ.02ರಂದು ಯುವವಾಹಿನಿ ರಿ. ಸುಳ್ಯ ಘಟಕದ ವತಿಯಿಂದ ಬೆಳ್ಳಾರೆ ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ನಡೆದ...
*01,ಮೇಷರಾಶಿ*,ಇಂದು ಶಾಂತವಾಗಿ ಒತ್ತಡ ಮುಕ್ತವಾಗಿರಿ. ತರಾತುರಿಯಲ್ಲಿ ಯಾವುದೇ ಕೆಲಸಗಳನ್ನು ಮಾಡವುದು ಬೇಡಿ. ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ,ಗಮನಿಸಿ:-ಈ ದಿನ ಕಚೇರಿಯಲ್ಲಿ ಹೆಚ್ಚಿನ ಕೆಲಸವನ್ನು ಮಾಡಬೇಕಾಗಿ ಬರುವುದು,ಪರಿಹಾರ:-ನಿಮ್ಮ ತಂದೆ ಅಥವಾ ತಂದೆಯಂತಹ ವ್ಯಕ್ತಿಯಿಂದ ಆಶೀರ್ವಾದ ಪಡೆಯಿರಿ, *02,ವೃಷಭರಾಶಿ*,ನಿಮ್ಮ ಆಸಕ್ತಿಗಳನ್ನು ಮತ್ತು...
ಪುತ್ತೂರಿನ ಅಕ್ಷಯ ಪದವಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಒಕ್ಕೂಟ ಪರಿಷತ್ ಚುನಾವಣೆಯು ಜು. 30ರಂದು ಯಶಸ್ವಿಯಾಗಿ ನಡೆಯಿತು. ಇದರ ಅಂಗವಾಗಿ ವಿಜೇತ ಪ್ರತಿನಿಧಿಗಳ ಪದಗ್ರಹಣ ಸಮಾರಂಭವನ್ನು ಕಾಲೇಜಿನಲ್ಲಿ ವಿಜೃಂಭಣೆಯಿAದ ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಗೋ ಲಕ್ಷ್ಮಿ ಎಂಟರ್ಪ್ರೈಸಸ್ನ ಮಾಲಕರು ಹಾಗೂ ರಾಷ್ಟ್ರೀಯ ಜೆಸಿಐ (JCI) ತರಬೇತುದಾರ ಕೃಷ್ಣ ಮೋಹನ್ ಪಿ.ಎಸ್. ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ...
