ಭಾರತೀಯ ಭೂಸೇನೆಯಲ್ಲಿ ಹವಾಲ್ದಾರ್(ದಫೇದಾರ್) ಆಗಿ ಪದೋನ್ನತಿ ಹೊಂದಿದ ದಯಾನಂದ ಜಾಲುಮನೆ

ಕಳೆದ 22 ವರ್ಷಗಳಿಂದ ಭಾರತೀಯ ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ದಯಾನಂದ ಜಾಲುಮನೆ ಅವರು ಹವಾಲ್ದಾರ್(ದಫೇದಾರ್) ಆಗಿ ಪದೋನ್ನತಿ ಹೊಂದಿದ್ದಾರೆ. ಪ್ರಸ್ತುತ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿರುವ ಆರ್ಮಿ ಟ್ರೈನಿಂಗ್ ಕಮಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರು 2005ರಲ್ಲಿ ಭಾರತೀಯ ಭೂಸೇನೆಗೆ ಸೇರ್ಪಡೆಯಾಗಿ ತಮ್ಮ ಕರ್ತವ್ಯನಿಷ್ಠೆ ಹಾಗೂ ಉತ್ತಮ ಸೇವೆಯಿಂದ ಕ್ರಮವಾಗಿ SOWAR...

ಕಾವು ನವೋದಯ ಒಕ್ಕೂಟದಿಂದ ಮಕ್ಕಳಿಗೆ ಪುಸ್ತಕ-ಲೇಖನ ಸಾಮಗ್ರಿ ಮತ್ತು ಪ್ರೋತ್ಸಾಹ ಧನ ವಿತರಣೆ

ಕಾವು, ಆಗಸ್ಟ್ 4 : ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ. ಮಂಗಳೂರು ಮತ್ತು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಕಾವು ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ-ಲೇಖನ ಸಾಮಗ್ರಿ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ...
Ad Widget

ಸುಳ್ಯ : 13 ಜಮಾಅತ್‌ಗಳ ಸಂಯುಕ್ತ ಖಾಝಿಯಾಗಿ ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್ ಅಧಿಕಾರ ಸ್ವೀಕಾರ ; ಟಿ.ಎಂ ಶಹೀದ್ ತೆಕ್ಕಿಲ್ ಹಾಗೂ ಇಸ್ಹಾಕ್ ಹಾಜಿಯವರಿಗೆ ಸನ್ಮಾನ

ಸುಳ್ಯ : ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಇದರ ಅಧೀನದಲ್ಲಿ ಬರುವ 13 ಜಮಾಅತ್‌ಗಳ ಸಂಯುಕ್ತ ಖಾಝಿಯಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಅಸ್ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್ ಅವರು ಆ.04ರಂದು ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಸಾಮಾಜಿಕ, ರಾಜಕೀಯ, ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು...

ಬೆಳ್ಳಾರೆಯಲ್ಲಿ ಬಿ.ಎಸ್.ಎನ್.ಎಲ್ 4G ನೆಟ್‌ವರ್ಕ್ ಇದ್ದರೂ ಸಿಮ್ ಸಿಗದೇ ಗ್ರಾಹಕರ ಪರದಾಟ..!!

ಬೆಳ್ಳಾರೆಯಲ್ಲಿ ಬಿ.ಎಸ್.ಎನ್.ಎಲ್ 4G ಸೇವೆ ಲಭ್ಯವಿದ್ದರೂ, ಹೊಸ ಬಿ.ಎಸ್.ಎನ್.ಎಲ್ ಸಿಮ್ ಕಾರ್ಡ್ ಪಡೆಯಲು ಸಾರ್ವಜನಿಕರು ಹಾಗೂ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳೀಯ ಮೊಬೈಲ್ ಅಂಗಡಿಗಳ ಮಾಹಿತಿಯಂತೆ, ಬಿ.ಎಸ್‌.ಎನ್.ಎಲ್ ಸಿಮ್ ಕಾರ್ಡ್‌ಗಳ ಸ್ಟಾಕ್ ದೀರ್ಘಕಾಲದಿಂದ ಲಭ್ಯವಾಗುತ್ತಿಲ್ಲ. ಈ ಕುರಿತು ವಿಚಾರಿಸಿದಾಗ, ಸ್ಥಳೀಯ ಬಿ.ಎಸ್.ಎನ್.ಎಲ್ ಡಿಸ್ಟ್ರಿಬ್ಯೂಟರ್ ಸಮರ್ಪಕವಾಗಿ ಸಿಮ್ ಪೂರೈಕೆ ಮಾಡುತ್ತಿಲ್ಲ ಎಂದು...

ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ವತಿಯಿಂದ ಗುರುವಂದನಾ ಕಾರ್ಯಕ್ರಮ

ಸುಬ್ರಹ್ಮಣ್ಯ ಆಗಸ್ಟ್ 05 : ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಮಂಗಳವಾರ ಗುರುವಂದನಾ ಕಾರ್ಯಕ್ರಮವನ್ನು ಪರ್ವತಮುಕ್ಕಿ ಸ್ಕಂದ ಕೃಪಾದಲ್ಲಿ ಆಯೋಜಿಸಲಾಯಿತು. ಪಂಜ ಕೆ.ಪಿ.ಎಸ್. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಇನ್ನರ್ವೀಲ್ ಕ್ಲಬ್ ಪೂರ್ವ ಅಧ್ಯಕ್ಷರಾದ ಲೀಲಾಕುಮಾರಿ ವಿಶ್ವನಾಥ್ ನಡುತೋಟ ಅವರನ್ನು ಸುಬ್ರಹ್ಮಣ್ಯ ಇನ್ನರ್ ವಿಲ್ ಕ್ಲಬ್ ಅಧ್ಯಕ್ಷರಾದ ಸೌಮ್ಯ ದಿನೇಶ್ ಅವರು...

ಸುಬ್ರಹ್ಮಣ್ಯ : ಆ.09ರಂದು “5ನೇ ವರ್ಷದ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ”

ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಸಹಯೋಗದಲ್ಲಿ ಸುರಕ್ಷಾ ಚಾರಿಟೇಬಲ್ ಟ್ರಸ್ಟ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ, ಯುವತೇಜಸ್ಸು ಟ್ರಸ್ಟ್, ಬಿ.ಎಂ.ಎಸ್ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ, ಕುಕ್ಕೆಶ್ರೀ ಟ್ಯಾಕ್ಸಿ...

ಕೊಲ್ಲಮೊಗ್ರು : ಆ.08ರಂದು “ಆಟಿದ ಕೂಟ-2026” ಕಾರ್ಯಕ್ರಮ ; ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

ಆಟಿ ತಿಂಗಳ ವಿಶೇಷತೆಯನ್ನು ಪರಿಚಯಿಸುವ ಹಾಗೂ ತುಳುನಾಡಿನ ಆಚರಣೆ, ಆಹಾರ ಪದ್ಧತಿ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ, ಚೈತನ್ಯ ಯುವತಿ ಮಂಡಲ(ರಿ.) ಕೊಲ್ಲಮೊಗ್ರು, ಮಹಾತ್ಮ ಯುವಕ ಮಂಡಲ(ರಿ.) ಕೊಲ್ಲಮೊಗ್ರು ಹಾಗೂ ಕೆವಿಜಿ ಪ್ರೌಢಶಾಲೆ ಕೊಲ್ಲಮೊಗ್ರು ಇವುಗಳ ಸಂಯುಕ್ತಾಶ್ರಯದಲ್ಲಿ ಆ.08 ಶನಿವಾರದಂದು ಕೊಲ್ಲಮೊಗ್ರದ ಕೆವಿಜಿ ಪ್ರೌಢಶಾಲೆ ವಠಾರದಲ್ಲಿ ಬೆಳಿಗ್ಗೆ 9:30ರಿಂದ...

ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಬ್ಯಾಂಕ್ ಆಫ್ ಬರೋಡಕ್ಕೆ ಆಯ್ಕೆ| ಬ್ಯಾಂಕ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಪ್ರತಿಭಾನ್ವಿತ ವಿದ್ಯಾರ್ಥಿನಿ; ವಿದ್ಯಾಮಾತಾ ಅಕಾಡೆಮಿಯ ನಿರಂತರ ತರಬೇತಿಗೆ ಮತ್ತೊಂದು ಯಶಸ್ಸು

ಕಳೆದ ಹಲವಾರು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಜೊತೆಗೆ ನಿರಂತರವಾದ ಮಾರ್ಗದರ್ಶನವನ್ನು ನೀಡುತ್ತಾ ಕರಾವಳಿ ಕರ್ನಾಟಕದಲ್ಲಿ ಮನೆಮಾತಾಗಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಜಯಪ್ರಭಾ ಕೆ ರವರು ಬ್ಯಾಂಕ್ ಆಫ್ ಬರೋಡ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಾತಿಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ನೇಮಕಗೊಂಡಿದ್ದಾರೆ.ಪುತ್ತೂರು...

ಕೃಷ್ಣಪ್ಪ ಗೌಡ ಕುಕ್ಕುಡೇಲು ನಿಧನ

ಐವರ್ನಾಡು ಗ್ರಾಮದ ಕುಕ್ಕುಡೇಲು ಕೃಷ್ಣಪ್ಪ ಗೌಡರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸಂಜೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 57 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಗೀತಾ , ಪುತ್ರ ಕೀರ್ತನ್, ಪುತ್ರಿ ಜಶ್ಮಿತಾ, ಸೊಸೆ ಹರ್ಷಿತಾ, ಮೊಮ್ಮಗಳು, ಸಹೋದರ ಶಾಂತಪ್ಪ ಗೌಡ, ಸಹೋದರಿಯರು ಹಾಗೂ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ನಾಳೆ ಸುಳ್ಯಕ್ಕೆ ಭೇಟಿ; ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಯು.ಟಿ. ಖಾದರ್ ಅವರು ನಾಳೆ (ಆ. 6) ಸುಳ್ಯಕ್ಕೆ ಬೇಟಿ ನೀಡಲಿದ್ದು, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗ್ಗೆ 9 ಗಂಟೆಗೆ ಸುಳ್ಯಕ್ಕೆ ಆಗಮಿಸುವ ಸಚಿವರು ಬೆಳಗ್ಗೆ 10 ರಿಂದ ಸುಳ್ಯ ತಾಲೂಕು ಪಂಚಾಯತ್...
Loading posts...

All posts loaded

No more posts

error: Content is protected !!