ದ್ವಾದಶ ರಾಶಿಗಳ ದಿನ ಭವಿಷ್ಯ – 07 ಆಗಸ್ಟ್ 2026

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ
ಮಂಡೆಕೋಲು, ಸುಳ್ಯ
ಮೊ: 9591969197


ದಿನಾಂಕ : 07-08-2026 ಶುಕ್ರವಾರ

01)🐏ಮೇಷ ರಾಶಿ : ಇಂದು ನಿಮಗೆ ತುಂಬಾ ಶುಭ ದಿನ. ವೃತ್ತಿಪರ ಜೀವನದಲ್ಲಿ ನೀವು ಒಳ್ಳೆಯ ಸುದ್ದಿಯನ್ನು ಸ್ವೀಕರಿಸುತ್ತೀರಿ. ಉನ್ನತ ಅಧಿಕಾರಿಗಳ ಬೆಂಬಲದಿಂದ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ವ್ಯರ್ಥ ಪ್ರಯಾಣವನ್ನು ಮಾಡಬೇಕಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ… ಗಮನಿಸಿ : ವ್ಯವಹಾರದಲ್ಲಿ ಬಂಧುಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ… ಪರಿಹಾರ : ನಿಮ್ಮ ಮನೆದೇವರ ಸ್ಮರಣೆ ಮಾಡಿ.

. . . . . . . . .

02)🐂ವೃಷಭ ರಾಶಿ : ನೀವು ಸಾಲದಿಂದ ಮುಕ್ತರಾಗುತ್ತೀರಿ. ಕೌಟುಂಬಿಕ ಜೀವನದಲ್ಲಿ ಸಂತೋಷವನ್ನು ಹಂಚಿಕೊಳ್ಳುತ್ತೀರಿ. ಕೈಗೆತ್ತಿಕೊಂಡ ಕೆಲಸದಲ್ಲಿ ಹೆಚ್ಚಿನ ಪ್ರಯತ್ನದಿಂದ ಸ್ವಲ್ಪ ಫಲಿತಾಂಶವನ್ನು ಪಡೆಯುತ್ತೀರಿ. ಬಂಧು ಮಿತ್ರರೊಂದಿಗೆ ಅನಿರೀಕ್ಷಿತ ವಾದ ವಿವಾದಗಳು ಉಂಟಾಗುತ್ತವೆ. ಅಗತ್ಯಕ್ಕೆ ಆರ್ಥಿಕ ಸಹಾಯ ದೊರೆಯದೆ ತೊಂದರೆಗಳನ್ನು ಎದುರಿಸುತ್ತೀರಿ… ಗಮನಿಸಿ : ಪ್ರಮುಖ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ… ಪರಿಹಾರ : ತಂದೆ ತಾಯಿ ಆಶೀರ್ವಾದ ಪಡೆಯಿರಿ.

. . . . . . .

03)👥ಮಿಥುನರಾಶಿ : ಇಂದು ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ಸಹೋದರರೊಂದಿಗಿನ ವಿವಾದಗಳು ರಾಜಿಯಾಗುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಅನಿರೀಕ್ಷಿತ ಅಭಿವೃದ್ಧಿ ಸಾಧಿಸುತ್ತೀರಿ… ಗಮನಿಸಿ : ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ… ಪರಿಹಾರ : ತಾಯಿ ಚಾಮುಂಡೇಶ್ವರಿಯನ್ನು ನೆನೆಯಿರಿ.

04)🦀ಕರ್ಕ ರಾಶಿ : ಇಂದು ನಿಮ್ಮ ಎಲ್ಲಾ ಕನಸುಗಳು ನನಸಾಗುತ್ತವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಗೆ ಹಲವು ಸುವರ್ಣಾವಕಾಶಗಳು ದೊರೆಯಲಿವೆ. ನಿರುದ್ಯೋಗ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಶ್ರಮ ಹೆಚ್ಚಾಗುತ್ತದೆ. ಹಣಕಾಸಿನ ಪರಿಸ್ಥಿತಿಯು ಹೆಚ್ಚು ಗೊಂದಲಮಯವಾಗಿರುತ್ತದೆ… ಪರಿಹಾರ : ಕಾಳಿಕಾದೇವಿಯ ದರ್ಶನ ಮಾಡಿ.

05) 🦁ಸಿಂಹ ರಾಶಿ : ಇಂದು ನಿಮಗೆ ಉತ್ತಮ ದಿನವಾಗಲಿದೆ. ಆದರೆ ವ್ಯಾಪಾರದಲ್ಲಿ ಏರಿಳಿತಗಳು ಸಾಧ್ಯ. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಿ. ಪ್ರಮುಖ ವ್ಯವಹಾರಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳನ್ನು ಕಾರ್ಯಗತಗೊಳಿಸುವುದು ಉತ್ತಮ. ಸ್ಥಿರಾಸ್ತಿ ಮಾರಾಟದಲ್ಲಿ ಹೊಸ ಲಾಭ ದೊರೆಯುತ್ತದೆ… ಪರಿಹಾರ:-ದನ ಕರುಗಳಿಗೆ ಆಹಾರ ನೀಡಿ.

06)👩‍🦳ಕನ್ಯಾ ರಾಶಿ : ಹೂಡಿಕೆಗೆ ಸಂಬಂಧಿಸಿದಂತೆ ಗೊಂದಲವಿದ್ದರೆ ಖಂಡಿತ ತಜ್ಞರ ಸಲಹೆ ಪಡೆಯಿರಿ. ಇಂದು ನೀವು ಮಕ್ಕಳ ಕಡೆಯಿಂದ ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ. ಕೈಗೆತ್ತಿಕೊಂಡ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ… ಗಮನಿಸಿ : ಇಂದು ಉದ್ಯೋಗಗಳಲ್ಲಿ ಕೆಲಸದ ಒತ್ತಡದಿಂದ ಮುಕ್ತಿ ದೊರೆಯುತ್ತದೆ… ಪರಿಹಾರ : ಅನಾಥರಿಗೆ ಅನ್ನದಾನ ಮಾಡಿ.

07)⚖️ತುಲಾ ರಾಶಿ : ಇಂದು ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡಲಿದೆ. ಹಠಾತ್ ಪ್ರಯಾಣ ಮಾಡಬೇಕಾಗುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ವೃತ್ತಿಪರ ವ್ಯವಹಾರಗಳು ನಿರುತ್ಸಾಹ ವಾತಾವರಣವಿರುತ್ತದೆ. ಕೆಲವು ವಿಚಾರಗಳಲ್ಲಿ ಮಿತ್ರರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ… ಗಮನಿಸಿ : ಇಂದು ಉದ್ಯೋಗದ ವಾತಾವರಣವು ಗೊಂದಲಮಯವಾಗಿರುತ್ತದೆ… ಪರಿಹಾರ : ಶ್ರೀಮಹಾಲಕ್ಷ್ಮಿಯನ್ನು ಪೂಜಿಸಿ.

08)🦂ವೃಶ್ಚಿಕ ರಾಶಿ : ಇಂದು ಯಾರಿಗೂ ಸಾಲ ನೀಡುವುದನ್ನು ತಪ್ಪಿಸಿ. ಹೂಡಿಕೆ ಸಂಬಂಧಿತ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಹಣಕಾಸಿನ ಪರಿಸ್ಥಿತಿ ಅಸ್ತವ್ಯಸ್ತವಾಗಿರುತ್ತದೆ. ಸಹೋದರರೊಂದಿಗೆ ವಿವಾದ ಉಂಟಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ… ಗಮನಿಸಿ : ಇಂದು ಉದ್ಯೋಗದಲ್ಲಿ ಅಧಿಕಾರಿಗಳ ಒತ್ತಡ ಹೆಚ್ಚಾಗುತ್ತದೆ… ಪರಿಹಾರ : ದೇವಸ್ಥಾನಕ್ಕೆ ತುಳಸಿಯನ್ನು ನೀಡಿ.

09)🏹ಧನಸ್ಸು ರಾಶಿ : ನಿಮ್ಮ ಕೆಲಸ ಮತ್ತು ಸ್ವಭಾವದಿಂದ ಜನರು ಸಂತೋಷವಾಗಿರುತ್ತಾರೆ. ಕೌಟುಂಬಿಕ ಜೀವನದಲ್ಲೂ ಸುಖ ಶಾಂತಿ ಇರುತ್ತದೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಭೂಮಿಗೆ ಸಂಬಂಧಿಸಿದ ಖರೀದಿಗಳಲ್ಲಿ ಹೊಸ ಲಾಭ ದೊರೆಯುತ್ತದೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ಕೈಗೊಂಡ ಕಾರ್ಯಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ… ಗಮನಿಸಿ : ಇಂದು ಉತ್ಸಾಹದಿಂದ ಕೆಲಸ ಮಾಡಿ ಅಧಿಕಾರಿಗಳಿಂದ ಮೆಚ್ಚುಗೆಯನ್ನು ಪಡೆಯುತ್ತೀರಿ… ಪರಿಹಾರ : ಶ್ರೀ ಆಂಜನೇಯ ಸ್ತೋತ್ರ ಪಠಿಸಿ.

10)🐊ಮಕರ ರಾಶಿ : ದೀರ್ಘಕಾಲ ಬಾಕಿ ಇರುವ ಕೆಲಸದಲ್ಲಿ ನೀವು ಬಯಸಿದ ಯಶಸ್ಸನ್ನು ಪಡೆಯುತ್ತೀರಿ. ಹೊಸ ಆಸ್ತಿ ಅಥವಾ ವಾಹನವನ್ನು ಖರೀದಿಸುವ ಅವಕಾಶವಿರುತ್ತದೆ. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಸಹೋದರರೊಂದಿಗೆ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ಬಾಲ್ಯದ ಗೆಳೆಯರ ಭೇಟಿ ಸಂತಸ ತರುತ್ತದೆ… ಗಮನಿಸಿ : ಇಂದು ವೃತ್ತಿ ಪರ ಉದ್ಯೋಗಗಳಲ್ಲಿ ಕಿರಿಕಿರಿಗಳು ದೂರವಾಗುತ್ತವೆ… ಪರಿಹಾರ : ನಿಮ್ಮ ಮನೆ ದೇವರನ್ನು ಪ್ರಾರ್ಥಿಸಿ.

11)⚱️ಕುಂಭರಾಶಿ : ಇಂದು ನೀವು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ಉದ್ಯೋಗ ಮತ್ತು ವ್ಯಾಪಾರದಲ್ಲಿ ವಾತಾವರಣವು ಅನುಕೂಲಕರವಾಗಿರುತ್ತದೆ. ಹಠಾತ್ ಧನ ವ್ಯಯದ ಸೂಚನೆಗಳಿವೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಹಣಕಾಸಿನ ವ್ಯವಹಾರಗಳು ನೀರುತ್ಸಾಹ ಗೊಳಿಸುತ್ತವೆ… ಗಮನಿಸಿ : ಇಂದು ಸಣ್ಣ ಅನಾರೋಗ್ಯದ ಸೂಚನೆಗಳಿವೆ… ಪರಿಹಾರ : ನಿಮ್ಮ ಕುಲದೇವರ ಪ್ರಾರ್ಥನೆ ಮಾಡಿ.

12)🐬ಮೀನ ರಾಶಿ : ಕೆಲಸದಿಂದ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ಕುಟುಂಬದೊಂದಿಗೆ ಸಮಯ ಕಳೆಯಿರಿ. ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಫಲಿಸುವುದಿಲ್ಲ. ದೂರ ಪ್ರಯಾಣದ ಸೂಚನೆಗಳಿವೆ. ಕೋಪವನ್ನು ತಪ್ಪಿಸಿ… ಗಮನಿಸಿ:-ಮಾನಸಿಕ ಶಾಂತಿಗಾಗಿ ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ… ಪರಿಹಾರ : ನಿಮ್ಮ ಗ್ರಾಮ ದೇವತೆಗೆ ಪೂಜೆ ಮಾಡಿಸಿ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading