ಸುಳ್ಯ : ಆಂಬುಲೆನ್ಸ್ ಚಾಲಕ ಮಾಲಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ: ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.

. . . . . . . . .

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು, ಸುಳ್ಯದ ಪ್ರಾಂಶುಪಾಲರಾದ ಡಾ. ಲೀಲಾಧರ್ ಅವರು ಧ್ವಜಾರೋಹಣ ನೆರವೇರಿಸಿದರು.

. . . . . . .

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಲೀಲಾಧರ್ ಅವರು, ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಎಲ್ಲಾ ಸದಸ್ಯರು ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಅತ್ಯುತ್ತಮ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದನ್ನು ಶ್ಲಾಘಿಸಿದರು. ಹಗಲು-ರಾತ್ರಿ ಎನ್ನದೆ ಜೀವ ಉಳಿಸುವ ಮಹತ್ವದ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸಂಘದ ಸದಸ್ಯರ ಸೇವೆಯನ್ನು ಅವರು ವಿಶೇಷವಾಗಿ ಪ್ರಶಂಸಿಸಿದರು. ಇದೇ ಸಂದರ್ಭದಲ್ಲಿ ಸಂಘದ ಎಲ್ಲಾ ಸದಸ್ಯರಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.

ಸಂಘದ ಕಾರ್ಯದರ್ಶಿ ಸಿದ್ದಿಕ್ ಗೂನಡ್ಕ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಂಘದ ಕೋಶಾಧಿಕಾರಿ ತಾಜುದ್ದೀನ್ ಟರ್ಲಿ ಅವರು ವಂದನಾರ್ಪಣೆ ಸಲ್ಲಿಸಿದರು.

ಧ್ವಜಾರೋಹಣದ ಬಳಿಕ ಸಾರ್ವಜನಿಕರಿಗೆ ಸಿಹಿತಿಂಡಿ ವಿತರಿಸಲಾಯಿತು. ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘವು ಸಾರ್ವಜನಿಕ ಸೇವೆ ಹಾಗೂ ತುರ್ತು ಆರೋಗ್ಯ ಸೇವೆಯಲ್ಲಿ ತನ್ನ ಜವಾಬ್ದಾರಿಯನ್ನು ಮುಂದುವರಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading