ಸುಬ್ರಹ್ಮಣ್ಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – “ಸ್ವಾಸ್ಥ್ಯ ಸಮಾಜದಿಂದ ಶಸಕ್ತ ರಾಷ್ಟ್ರ ನಿರ್ಮಾಣ” : ಭಾನುಪ್ರಕಾಶ್ ಪೆರುಮುಂಡ

ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಆ. 24ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು....

ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ ಗುಂಡೆಸೆತ ಸ್ಪರ್ಧೆಯಲ್ಲಿ ಕೊಲ್ಲಮೊಗ್ರದ ಮಿಥುನ್ ಬಳ್ಳಡ್ಕ ಪ್ರಥಮ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ(ರಿ.) ಬೆಂಗಳೂರು ಇದರ ಆಶ್ರಯದಲ್ಲಿ ಆ.23ರಂದು ಬೆಂಗಳೂರಿನ ಜಾಲಹಳ್ಳಿ ಹೆಚ್.ಎಂ.ಟಿ ಗ್ರೌಂಡ್ ನಲ್ಲಿ ನಡೆದ 30 ವರ್ಷದೊಳಗಿನ ವಯೋಮಿತಿ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಮಿಥುನ್ ಬಳ್ಳಡ್ಕ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ನೇಮಿಚಂದ್ರ ಬಳ್ಳಡ್ಕ ಹಾಗೂ ಪ್ರೇಮಾ ದಂಪತಿಯ ಪುತ್ರ. (ವರದಿ :...
Ad Widget

ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ ಗುಂಡೆಸೆತ ಸ್ಪರ್ಧೆಯಲ್ಲಿ ಹರಿಹರ ಪಳ್ಳತ್ತಡ್ಕದ ಸಂದೀಪ್ ಕೇವಳ ಪ್ರಥಮ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ(ರಿ.) ಬೆಂಗಳೂರು ಇದರ ಆಶ್ರಯದಲ್ಲಿ ಆ.23ರಂದು ಬೆಂಗಳೂರಿನ ಜಾಲಹಳ್ಳಿ ಹೆಚ್.ಎಂ.ಟಿ ಗ್ರೌಂಡ್ ನಲ್ಲಿ ನಡೆದ 30 ವರ್ಷದ ಮೇಲಿನ ವಯೋಮಿತಿ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಸಂದೀಪ್ ಕೇವಳ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ದಿ. ದಶರಥ ಗೌಡ ಕೇವಳ ಹಾಗೂ ಮೀನಾಕ್ಷಿ...

ಅನಿಲ್ ಅಂಬೆಕಲ್ಲು ಹೃದಯಾಘಾತದಿಂದ ನಿಧನ

ಸುಳ್ಯ : ಮರ್ಕಂಜದ ಗ್ರಾಮದ ದೊಡ್ಡಿತ್ಲು ನಿವಾಸಿ ಅನಿಲ್ ಅಂಬೆಕಲ್ಲು ಹಿಂದಿನ ರಾತ್ರಿಯಿಂದ ಅಸೌಖ್ಯದಿಂದ ಬಳಲುತ್ತಿದ್ದು, ಇಂದು(ಆ.25)ಮುಂಜಾನೆ ಹೃದಯಾಘಾತದಿಂದ ನಿಧನರಾದರೆಂದು ತಿಳಿದುಬಂದಿದೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ರಮ್ಯ, ಪುತ್ರರಾದ ಮೋಕ್ಷಿತ್ ಹಾಗೂ ಕಿಶನ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
error: Content is protected !!