ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕೆವಿಜಿ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 80ನೇ ವರ್ಷದ ಸ್ವಾತಂತ್ರತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಗಸ್ಟ್ 15ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದರವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರತ್ರ್ಯೋತ್ಸವದ ಸಂದೇಶವನ್ನು ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಸಪ್ತಾಹ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಸುಳ್ಯ ತಾಲೂಕು ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಾಧಿಕಾರಿ ಡಾ|| ಡಿ ವೀರೆಂದ್ರ ಹೆಗ್ಗಡೆಯವರ ಆಶಯದಂತೆ "ನಮ್ಮ ಊರು ನಮ್ಮ ಶ್ರದ್ಧಾ ಕೇಂದ್ರ “ಸ್ವಚ್ಛತಾ ಸಪ್ತಾಹ" ಕಾರ್ಯಕ್ರಮವನ್ನು ಪ್ರತಿ ವರ್ಷ 2 ಬಾರಿ ಸ್ವಾತಂತ್ರೋತ್ಸವ ಹಾಗೂ ಮಕರ ಸಂಕ್ರಮಣರಂದು ಸುಳ್ಯ ತಾಲೂಕಿನಾದ್ಯಂತ ಅನೇಕ ದೇವಸ್ಥಾನ,...
Ad Widget

ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಇಂದು 80ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಪಂಚಾಯತ್ ಆಡಳಿತಾಧಿಕಾರಿ ಶ್ರೀಮತಿ ಶೈಲಜಾ.ಬಿ ಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರುಗಳಾದ ಶೈಲೇಶ್ ಅಂಬೆಕಲ್ಲು, ಶ್ರೀಮತಿ ಸುಲೋಚನಾ ದೇವ, ಸದಸ್ಯರಾದ ದುರ್ಗಾದಾಸ್ ಮೆತ್ತಡ್ಕ ಹಾಗೂ ಸಂಜೀವಿನಿ ಸಂಘ ದ...

ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಶೀತಲ್ ಯು.ಕೆ ರವರು ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ತಿಳಿಸಿದರು.  ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಸದಸ್ಯರಾದ ರಂಜಿತ್ ರೈ...

ಪಿ.ಎಂ.ಶ್ರೀ ಕೆ.ಪಿ.ಎಸ್ ಸುಳ್ಯದಲ್ಲಿ 80ನೇ ಅದ್ದೂರಿ ಸ್ವಾತಂತ್ರ್ಯೋತ್ಸವ

ಸುಳ್ಯ : ನಗರದ ಪಿಎಂಶ್ರೀ ಕೆಪಿಎಸ್ ಶಾಲೆ ಸುಳ್ಯ ಇಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಆಗಸ್ಟ್ 15ರಂದು ಬೆಳಗ್ಗೆ 8 ಗಂಟೆಗೆ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌ಡಿಎಂಸಿ) ಅಧ್ಯಕ್ಷ ರವಿರಾಜ್ ಅಡ್ಕಾರ್ ಅವರು ಶಾಲಾ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೈಸೂರಿನಿಂದ ಆಗಮಿಸಿದ್ದ...

ಸುಬ್ರಹ್ಮಣ್ಯ ವಲಯ ಅರಣ್ಯ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ವಲಯ ಅರಣ್ಯ ಕಛೇರಿಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವಲಯ ಅರಣ್ಯಾಧಿಕಾರಿಗಳಾದ ಚೇತನ್.ಹೆಚ್.ಪಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಲಯದ ಎಲ್ಲಾ ಕ್ಷೇತ್ರ ಸಿಬ್ಬಂದಿಗಳು ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

ಹರಿಹರ ಪಳ್ಳತ್ತಡ್ಕ : ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಳ್ಳತ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ವೆಂಕಟೇಶ್ ನಾಯ್ಕ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಬಗ್ಗೆ ತಿಳಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. 10ನೇ ತರಗತಿ ವಿದ್ಯಾರ್ಥಿನಿ ದೀಪ್ತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ...

ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಚೊಕ್ಕಾಡಿ ವಿದ್ಯಾ ಸಂಸ್ಥೆಗಳು ಕುಕ್ಕುಜಡ್ಕ 80ನೆಯ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಗಸ್ಟ್ 15ರಂದು ಆಚರಿಸಲಾಯಿತು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ನಿರಂಜನ ಕೋಡ್ತುಗುಳಿ ಅವರು ಧ್ವಜಾರೋಹಣಗೈದು ಗಾಂಧೀಜಿ ಮತ್ತು ಅಂಬೇಡ್ಕರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, "ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಸ್ಮರಣೆ ಮಾಡಿಕೊಳ್ಳೋದು ಇಂದು ಅಗತ್ಯವಾಗಿದೆ, ಹಾಗೆ ವಿದ್ಯಾರ್ಥಿಗಳು ಜೀವನದಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ದೇಶವನ್ನು ಮುನ್ನಡೆಸಿಕೊಂಡು...

ಜಾಲ್ಸೂರು : ಮಹಾಬಲಡ್ಕ ಕಾಂಪ್ಲೆಕ್ಸ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಜಾಲ್ಸೂರಿನ ಮಹಾಬಲಡ್ಕ ಕಾಪ್ಲೆಕ್ಸ್ ನಲ್ಲಿ 80ನೇ ಸ್ವಾತಂತ್ರ್ಯವನ್ನು ಧ್ವಜಾರೋಹಣಯನ್ನು ಹಿರಿಯ ವರ್ತಕರಾದ ಎಂ.ಎಸ್ ಭಟ್ ಬೆನಕ ರವರು ನೆರವೆಸಿದರು. ಸುತ್ತಮುತ್ತಲಿನ ಹಲವಾರು ಗಣ್ಯರು ಹಾಗೂ ನಾಗರಿಕರು, ವರ್ತಕರು ಹಾಗೂ ಊರಮಹನಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಂ.ಎಸ್ ಶ್ಯಾಮ್ ಕುಮಾರ್ ಸ್ವಾಗತಿಸಿ ಕೆ.ನಾರಾಯಣ ಟೆೃಲರ್ ಧನ್ಯವಾದ ಸಮರ್ಪಿಸಿದರು.

ಸುಳ್ಯ : ಮಿಲಿಟರಿ ಗ್ರೌಂಡ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ ಮಿಲಿಟರಿ ಗ್ರೌಂಡ್ ನಲ್ಲಿ ಆ.15ರಂದು 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಸೈನಿಕ ಭವಾನಿ ಶಂಕರ ಕೊಲ್ಚಾರ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸೇರಿದ ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು.. ಮಿಲಿಟರಿ ಗ್ರೌಂಡ್ ನ ಹಿರಿಯ ನಾಗರಿಕರು, ಎಂ.ಜಿ ಬಾಯ್ಸ್ ತಂಡದ ಸದಸ್ಯರು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Loading posts...

All posts loaded

No more posts

error: Content is protected !!