- Friday
- August 21st, 2026
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳಿಗೆ ಪ್ರೊಜೆಕ್ಟರ್ ಮತ್ತು ಟ್ರೈ ಪೋಲ್ ಸ್ಟ್ಯಾಂಡ್ ಸಹಿತ ಸ್ಕ್ರೀನ್ ನ್ನು ಕೊಡುಗೆಯಾಗಿ ನೀಡಿರುತ್ತಾರೆ. ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ(ರಿ.) ಬಾಳಿಲ ಅಧ್ಯಕ್ಷರಾದ ರಾಧಾಕೃಷ್ಣರಾವ್.ಯು ಇವರ ಅಧ್ಯಕ್ಷತೆಯಲ್ಲಿ ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ...
ಸ್ನೇಹಿತರ ಕಲಾಸಂಘ ಬೆಳ್ಳಾರೆಯ ವತಿಯಿಂದ ಸೆಪ್ಟೆಂಬರ್ 5 ರಂದು ನಡೆಯುವ ಅಟ್ಟಿ ಮಡಿಕೆ ಮೊಸರು ಕುಡಿಕೆ ಹಾಗೂ ಸೆಪ್ಟಂಬರ್ 06 ರಂದು ನಡೆಯುವ ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಆಗಸ್ಟ್ 8 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ...
ಮಕ್ಕಳಿಗೆ ಎಳವೆಯಲ್ಲಿಯೇ ಸಾಮಾಜಿಕ ಸೇವೆಯನ್ನು ಕಲಿಸಲು ರೋಟರಿ ಕ್ಲಬ್ ಪ್ರಯೋಜಕತ್ವದಲ್ಲಿ ಇಂಟರ್ಯಾಕ್ಟ್ ಕ್ಲಬ್ ಆರಂಭಿಸಲಾಗಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಆಲೋಚನೆಗಳು ಬೆಳೆಯಲು ಸಹಕಾರಿಯಾಗುತ್ತದೆ ಎಂದು ರೋಟರಿ ಜಿಲ್ಲೆ 3181, ವಲಯ 5ರ ಜಿಲ್ಲಾ ತರಬೇತಿ ತಂಡದ ಸಂಯೋಜಕ ವಿನಯ್ ಕುಮಾರ್ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:08-08-2026 ಶನಿವಾರ*01,🐏ಮೇಷ ರಾಶಿ🐏*📃,ದೀರ್ಘಕಾಲ ಬಾಕಿ ಇರುವ ಕೆಲಸದಲ್ಲಿ ನೀವು ಬಯಸಿದ ಯಶಸ್ಸನ್ನು ಪಡೆಯುತ್ತೀರಿ. ಇದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ. ವ್ಯವಹಾರದಲ್ಲಿ ವಿಸ್ತರಣೆ ಕಂಡುಬರಲಿದೆ. ಮನೆಯಲ್ಲಿ ಸಂತೋಷದಿಂದ ಕಾಲ ಕಳೆಯುತ್ತೀರಿ ಮತ್ತು ಸಮಯಕ್ಕೆ ಸರಿಯಾಗಿ ಕೆಲಸಗಳನ್ನುಪೂರ್ಣಗೊಳಿಸುತ್ತೀರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳಿಂದ ಪ್ರಶಂಸೆ...
ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡಿದ ಆರೋಪಕ್ಕೊಳಗಾಗಿ ಬಂಧಿತರಾಗಿದ್ದ ಇಬ್ಬರಿಗೆ ಸುಳ್ಯ ನ್ಯಾಯಾಲಯ ಜಾಮೀನು ನೀಡಿದೆ ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಮೇಲೆ ಸಂಪಾಜೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆ. 5 ರಂದು ದಾಳಿ ಮಾಡಿ ಪೆರಾಜೆ ಗ್ರಾಮದ ಶರತ್ ಮತ್ತು ಗೌತಮ್ ಅವರನ್ನು ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದರು....
ಸುಳ್ಯದಲ್ಲಿ ಆ.7 ರಂದು ಸುರಿದ ಭಾರಿ ಮಳೆಗೆ ತೋಟಗಾರಿಕಾ ಇಲಾಖೆಯ ಬಳಿ ಬ್ರಹ್ಮರಗಯ - ಕೊಡಿಯಾಲಬೈಲು ರಸ್ತೆಗೆ ಅಡ್ಡವಾಗಿ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಸ್ಥಳೀಯರ ಮಾಹಿತಿಗೆ ತಕ್ಷಣವೇ ಸ್ಪಂದಿಸಿ ಸ್ಥಳಕ್ಕೆ ಬಂದ ನಗರ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಶಿಲ್ಪಾ ಸುದೇವ್ ರವರು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಿ,...
ಸುಳ್ಯ : ತಾಲೂಕಿನ ದುಗ್ಗಲಡ್ಕ, ಕಂದಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಆನೆಗಳ ಹಿಂಡು ರಾತ್ರಿ ಕೃಷಿಕರ ಜಮೀನುಗಳಿಗೆ ನುಗ್ಗಿ ಕೃಷಿ ನಾಶಪಡಿಸುತ್ತಿದೆ. ಕಳೆದ ಒಂದು ವಾರದಿಂದ ಸುಳ್ಯ ನಗರ ಪ್ರದೇಶವಾದ ಕುಂಬೆತ್ತಿಬನ, ದುಗ್ಗಲಡ್ಕ, ನೀರಬಿದಿರೆ, ಕಂದಡ್ಕ ಭಾಗದಲ್ಲಿ ಸುಮಾರು 6 ರಿಂದ 7 ಆನೆಗಳ ಹಿಂಡು ವಾಸ್ತವ್ಯವನ್ನು ಹೊಂದಿದ್ದು, ಕೃಷಿ ನಾಶದ ಜೊತೆಗೆ...
ಸುಬ್ರಹ್ಮಣ್ಯ : ಕಡಬ ತಾಲೂಕಿನ ಕುಮಾರಸ್ವಾಮಿ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿವೇದ್ಯಾ ಗಣೇಶ್ ಅವರು CUET ಪರೀಕ್ಷೆಯಲ್ಲಿ ಅರ್ಹತೆ ಪಡೆದು, ನವದೆಹಲಿಯಲ್ಲಿರುವ South Asian University(SAU)ಯ ಐದು ವರ್ಷದ Integrated BS-MS(Interdisciplinary Sciences) ಕೋರ್ಸ್ಗೆ ಪ್ರವೇಶ ಪಡೆದಿದ್ದಾರೆ. ಈ ಕೋರ್ಸ್ನಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಹಾಗೂ ಇತರೆ ವಿಜ್ಞಾನ ವಿಭಾಗಗಳ ಸಮಗ್ರ ಅಧ್ಯಯನದೊಂದಿಗೆ ಸಂಶೋಧನಾ...
ಬಿಳಿನೆಲೆ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂರು ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಿಡ ನೆಡುವ ಮೂಲಕ ಸಂಭ್ರಮಾಚರಣೆ ನಡೆಯಿತು. ಕಾರ್ಯಕ್ರಮವನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ...
ರಾಜ್ಯ ಸರಕಾರವು SIR ಪ್ರಕ್ರಿಯೆಯಲ್ಲಿ ರಾಜ್ಯದ ಅರ್ಹ ಮದಾರರು ಮತದಾರ ಪಟ್ಟಿಯಿಂದ ಹೊರಗೂಳಿಯದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಜಾತಿ ಪ್ರಮಾಣ ಪತ್ರದ ಮುದ್ರಿತ ಪ್ರತಿಯನ್ನು ಮನೆ ಮನೆಗೆ ತಲುಪಿಸುವ ಯೋಜನೆ ಕಾರ್ಯಗತ ಮಾಡಿದ್ದು, ಅಜ್ಜಾವರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು ಜಾತಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ...
Loading posts...
All posts loaded
No more posts
