ಇಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ ಬಿಎಂಎಸ್ ಮನವಿ

ಸುಳ್ಯ: ಭಾರತೀಯ ಮಜ್ದೂರ್ ಸಂಘದ ಆಟೋ ಚಾಲಕರ ಘಟಕದ ವತಿಯಿಂದ ಸುಳ್ಯ ನಗರದಲ್ಲಿ ಇಲೆಕ್ಟ್ರಿಕ್ ವಾಹನಗಳಿಗೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ಸ್ಥಳೀಯ ಶಾಸಕರು ಹಾಗೂ ಮೆಸ್ಕಾಂ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಆ. 4ರಂದು ಮನವಿ ಸಲ್ಲಿಸಲಾಯಿತು. ಸುಳ್ಯ ನಗರದಲ್ಲಿ ಇಲೆಕ್ಟ್ರಿಕ್ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ...

ಕಂದಡ್ಕ ನೀರಬಿದಿರೆ ಭಾಗದಲ್ಲಿ ಬೀಡು ಬಿಟ್ಟ ಆನೆಗಳ ಹಿಂಡು; ಕೃಷಿ ಹಾನಿ | ಜನರಲ್ಲಿ ಭಯದ ವಾತಾವರಣ

ಕಂದಡ್ಕ ಪರಿಸರದಲ್ಲಿ ಕಳೆದೊಂದು ವಾರದಿಂದ ಬೀಡು ಬಿಟ್ಟ ಆನೆಗಳ ಹಿಂಡು ಈ ಭಾಗದಲ್ಲಿ ನಿರಂತರ ಕೃಷಿ ತೋಟಗಳಿಗೆ ದಾಳಿ ನಡೆಸಿ ಹಾನಿ ಮಾಡುತ್ತಿದೆ. ಹೇಮಂತ್ ಕಂದಡ್ಕ, ಅಜಯ್ ಕೃಷ್ಣ ಕಂದಡ್ಕ, ನೀರಬಿದಿರೆ, ಮದಕ ಭಾಗದ ಹಲವು ಕೃಷಿ ತೋಟಗಳಿಗೆ ಆನೆಗಳ ಹಿಂಡು ದಾಳಿ ನಡೆಸಿ ಕೃಷಿ ಹಾನಿ ಮಾಡುತ್ತಿದೆ. ಈ ಭಾಗದ ನಿವಾಸಿಗಳು ಭಯದಲ್ಲಿ ಬದುಕುವಂತಾಗಿದೆ....
Ad Widget

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ; ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡಿಗೆ ಸಮಾರಂಭ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ 2021-22 ಸಾಲಿನ ವಿದ್ಯಾರ್ಥಿಗಳಿಗೆ ಬಿಳ್ಕೊಡಿಗೆ ಸಮಾರಂಭ ಕಾರ್ಯಕ್ರಮವು ಆ. 3ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಸಭಾಧ್ಯಕ್ಷತೆ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್‌ಮೆಂಟ್

ಆ. 31ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ಬೆಂಗಳೂರಿನ ಕೆ.ವಿ.ಜಿ. ಸಹ ಸಂಸ್ಥೆ ಎನ್.ಎಸ್.ವಿ.ಕೆ. ಕಾಲೇಜಿನಲ್ಲಿ ನಡೆಸಿದ ImpleVista IT India Pvt. Ltd. ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಅನನ್ಯ ನಾಮಧಾರ್ ಹೆಚ್.ಆರ್., ಜಯಮಾಲ ಎಂ.ಬಿ., ಕಾರ್ತಿಕ ಕೆ.ಹೆಚ್., ಮಂಜನಾಥ್ ಕೆ., ಪ್ರತೀಕ್ಷ...

ಮಳೆಯ ಹಿನ್ನೆಲೆ ನಾಳೆ(ಆ.04) ದ.ಕ ಜಿಲ್ಲೆಯ ಮಂಗಳೂರು ಹಾಗೂ ಪುತ್ತೂರು ಉಪವಿಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ; ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿದ ಜಿಲ್ಲಾಧಿಕಾರಿಗಳು

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ(ಆ.04) ಮಂಗಳೂರು ಉಪವಿಭಾಗದ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮುಲ್ಕಿ, ಉಳ್ಳಾಲದ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ...

ನೆಟ್ಟಾರು – ದೇವರಗುಂಡಿ ಸಂಪರ್ಕ ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ – ನಾಲ್ಕು ದಿನ ಕಳೆದರೂ ದುರಸ್ತಿಗೊಳಿಸದ ಮೆಸ್ಕಾಂ

ಬೆಳ್ಳಾರೆ ಗ್ರಾಮದ ನೆಟ್ಟಾರು ದೇವರಗುಂಡಿ ಸಂಪರ್ಕ ರಸ್ತೆಗೆ ನಾಲ್ಕು ದಿನಗಳ ಹಿಂದೆ ವಿದ್ಯುತ್ ಕಂಬವೊಂದು ಗಾಳಿ, ಮಳೆಗೆ ಅಡ್ಡಲಾಗಿ ಬಿದ್ದಿದ್ದು ಇಲ್ಲಿನ ಹಲವು ಮನೆಗಳವರು ನಾಲ್ಕು ದಿನಗಳಿಂದ ಕುಡಿಯುವ ನೀರು, ಸಂಚಾರ, ವಿದ್ಯುತ್ ಇಲ್ಲದೆ ಕತ್ತಲೆಯಲ್ಲಿದ್ದಾರೆ. ಸ್ಥಳೀಯ ಶಾಲೆ,ಮದರಸ ವಿದ್ಯಾರ್ಥಿ,ವಿದ್ಯಾರ್ಥಿನಿಗಳು,ಸಾರ್ವಜನಿಕರಿಗೆ ಸಂಚಾರ ಕಷ್ಟಕರವಾಗಿದೆ. ಸ್ಥಳೀಯರು ಬೆಳ್ಳಾರೆಯ ಮೆಸ್ಕಾಂ ಶಾಖಾ ಕಛೇರಿಗೆ ಈ ಕುರಿತು ದೂರು ನೀಡಿದ್ದರೂ...

ಪಂಜ : ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಪಾರದರ್ಶಕತೆಯ ಕುರಿತು ಆ.15ರಂದು ಸಾರ್ವಜನಿಕ ಸಭೆ ನಡೆಸುವಂತೆ ಭಕ್ತರಿಂದ ಮನವಿ

ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ, ಆರ್ಥಿಕ ಪಾರದರ್ಶಕತೆ ಹಾಗೂ ಗುತ್ತಿಗೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಉಂಟಾಗಿರುವ ಗೊಂದಲಗಳಿಗೆ ಸ್ಪಷ್ಟನೆ ನೀಡಲು ಆಗಸ್ಟ್ 15ರಂದು ಸಾರ್ವಜನಿಕ ಸಭೆ ಕರೆಯುವಂತೆ ಆಗ್ರಹಿಸಿ ಭಕ್ತರು ಸೋಮವಾರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರು ಅವರಿಗೆ ಮನವಿ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯವೈಖರಿ, ಹಣಕಾಸಿನ...

ಹರಿಹರ ಪಳ್ಳತ್ತಡ್ಕ : ಭಾರೀ ಮಳೆಗೆ ಸಂಪೂರ್ಣ ಹಾನಿಗೊಳಗಾದ ನೇತಾಜಿ ಯುವಕ ಮಂಡಲದ ಕಟ್ಟಡ ; ಸಚಿನ್ ಕ್ರೀಡಾ ಸಂಘದ ಕ್ರೀಡಾ ಪರಿಕರಗಳಿಗೂ ಹಾನಿ

ಹರಿಹರ ಪಳ್ಳತ್ತಡ್ಕ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ನೇತಾಜಿ ಯುವಕ ಮಂಡಲದ ಕಟ್ಟಡವು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಹಾನಿಗೊಳಗಾಗಿದೆ ಎಂದು ತಿಳಿದುಬಂದಿದ್ದು, ಕಟ್ಟಡದೊಳಗೆ ಸಚಿನ್ ಕ್ರೀಡಾ ಸಂಘದ ಕ್ರೀಡಾ ಪರಿಕರಗಳಿದ್ದು, ಅವುಗಳಿಗೂ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

ಇಂದಿನ(ಆಗಸ್ಟ್ 03) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 03 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಸುಬ್ರಹ್ಮಣ್ಯ : ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಬ್ರಹ್ಮಣ್ಯ, ಕಲ್ಲಾಜೆ ಮತ್ತು ಕುಲ್ಕುಂದ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದಿನಾಂಕ ಆ.02 ರಂದು ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ವಿಮಲಾ ರಂಗಯ್ಯರವರ ಅಧ್ಯಕ್ಷತೆಯಲ್ಲಿ...
Loading posts...

All posts loaded

No more posts

error: Content is protected !!