ಸೆ.13 ರಂದು ಕಂದ್ರಪ್ಪಾಡಿ & ಆಲೆಟ್ಟಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಡಡ ನಿರ್ಮಾಣಕ್ಕೆ ಸಂಸದರಿಂದ ಗುದ್ದಲಿಪೂಜೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಯುಷ್ಮಾನ್ ಭಾರತ ಯೋಜನೆಯಡಿ, ರಾಜ್ಯ ಸರಕಾರದ ಸಹಯೋಗದೊಂದಿಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ 23 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ವಿವಿಧ ಕಾಮಗಾರಿಗಳಿಗೆ ಶೀಘ್ರದಲ್ಲೇ ಚಾಲನೆ ದೊರೆಯಲಿದೆ.
ಇದರ ಭಾಗವಾಗಿ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಹಾಗೂ ಆಲೆಟ್ಟಿ ಗ್ರಾಮಗಳಲ್ಲಿ ತಲಾ ರೂ.65 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಲಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗೆ ಸೆ.13ರಂದು ಗುದ್ದಲಿಪೂಜೆ ನೆರವೇರಲಿದೆ.
ಕಂದ್ರಪ್ಪಾಡಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಹಾಗೂ ಆಲೆಟ್ಟಿಯಲ್ಲಿ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ಗುದ್ದಲಿಪೂಜೆ ನೆರವೇರಿಸಲಿದ್ದಾರೆ. ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇಲಾಖಾ ಅಧಿಕಾರಿಗಳು ಹಾಗೂ ವಿವಿಧ ಗ್ರಾಮಗಳ ಪ್ರಮುಖರು ಉಪಸ್ಥಿತರಿರುವರು. ಸುಳ್ಯ ಮತ್ತು ಕಡಬ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಮಂಜೂರಾಗಿರುವ ಆರೋಗ್ಯ ಕೇಂದ್ರಗಳ ಕಾಮಗಾರಿಗಳಿಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಗುವುದು ಎಂದು ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading