ಹರಿಹರ ಪಳ್ಳತ್ತಡ್ಕ : “17ನೇ ವರ್ಷದ ಶ್ರೀ ಗಣೇಶೋತ್ಸವ” – ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ – ನಾಳೆ(ಸೆ.15) ಅದ್ಧೂರಿ ಮೆರವಣಿಗೆಯೊಂದಿಗೆ ಶ್ರೀ ಗೌರಿ ಮತ್ತು ಗಣೇಶ ದೇವರ ಮೆರವಣಿಗೆ ಹಾಗೂ ವಿಸರ್ಜನೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಸೆ.13 ಆದಿತ್ಯವಾರದಿಂದ ಸೆ.15 ಮಂಗಳವಾರದವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ “17ನೇ ವರ್ಷದ ಶ್ರೀ ಗಣೇಶೋತ್ಸವ”ವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಮೊದಲ ದಿನವಾದ ನಿನ್ನೆ(ಸೆ.13) ಬೆಳಿಗ್ಗೆ ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ನಂತರ ಶ್ರೀ ಗೌರಿ ಪೂಜೆ ನಡೆಯಿತು. ನಂತರ ಸಂಜೆ ಶ್ರೀ...

ವಳಲಂಬೆಯಲ್ಲಿ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಚಾಲನೆ – ನಾಳೆ ಶೋಭಾಯಾತ್ರೆ

ಗುತ್ತಿಗಾರು : ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಇಂದು ಚಾಲನೆ ನೀಡಲಾಗಿದ್ದು ನಾಳೆ ಸೆ.15 ರಂದು ಶ್ರೀ ಗಣೇಶನ ಶೋಭಾಯಾತ್ರೆ ನಡೆಯಲಿದೆ. ಸೆ.14ರಂದು ಬೆಳಿಗ್ಗೆ ಗಣಪತಿ ಪ್ರತಿಷ್ಠೆ ನಂತರ ಸಾಮೂಹಿಕ ಗಣಪತಿ ಹವನ ನಡೆಯಿತು. ಮಕ್ಕಳಿಗೆ ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿ ಚುಚ್ಚುವ...
Ad Widget

ಮಾವಿನಕಟ್ಟೆ ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಪ್ರವೀಣ್ ಮಾವಿನಕಟ್ಟೆ, ಕಾರ್ಯದರ್ಶಿಯಾಗಿ ಲಿಖಿತ್ ಕೆ.ಸಿ.

ಮಾವಿನಕಟ್ಟೆ: ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್, ಮಾವಿನಕಟ್ಟೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕ್ಲಬ್‌ನ ನೂತನ ಅಧ್ಯಕ್ಷರಾಗಿ ಪ್ರವೀಣ್ ಮಾವಿನಕಟ್ಟೆ ಅವರು ಮರು ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಲಿಖಿತ್ ಕೆ.ಸಿ., ಜತೆ ಕಾರ್ಯದರ್ಶಿಯಾಗಿ ಮನೋಜ್ ದೇವ, ಉಪಾಧ್ಯಕ್ಷರಾಗಿ ಕಿರಣ್ ಮಾವಿನಕಟ್ಟೆ, ಖಜಾಂಜಿಯಾಗಿ ಫಾರೂಕ್ ಮಾವಿನಕಟ್ಟೆ, ಸಂಘಟನಾ ಕಾರ್ಯದರ್ಶಿಯಾಗಿ ರಿಯಾಜ್ ಮಾವಿನಕಟ್ಟೆ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:14-09-2026 ಸೋಮವಾರ*01,🐏ಮೇಷರಾಶಿ🐏*📃,ದೂರದ ಬಂಧುಗಳಿಂದ ಶುಭ ಸಮಾಚಾರ ಸಿಗುತ್ತದೆ. ಮನೆಯಲ್ಲಿ ಆಕಸ್ಮಿತವಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಪಡೆಯುತ್ತೀರಿ. ಹೊಸ ಸ್ನೇಹಿತರ ಪರಿಚಯ ಲಾಭದಾಯಕವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ,ಗಮನಿಸಿ:-ಉದ್ಯೋಗದಲ್ಲಿ ಹೆಚ್ಚುವರಿಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತೀರಿ,ಪರಿಹಾರ:-ಶ್ರೀ ದುರ್ಗಾ ದೇವಿಯನ್ನು ಸ್ಮರಣೆ ಮಾಡಿ,*02,🐂ವೃಷಭರಾಶಿ🐂*📃,ಒಂದು...

ಸುಳ್ಯದ : ಮಹಾಲಕ್ಷ್ಮೀ ಫ್ಯಾನ್ಸಿ ಗೋಡೌನ್ ಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ಮಹಾಲಕ್ಷ್ಮಿ ಪ್ಯಾನ್ಸಿ ಯ ಗೋಡಾನ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅದರಲ್ಲಿದ್ದ ವಸ್ತುಗಳು ಸಂಪೂರ್ಣ ಹೊತ್ತಿ ಉರಿದಿದೆ. ಗೋಡೌನ್ ನಲ್ಲಿ ಇಂದು ಮುಂಜಾನೆ ಅಂದಾಜು 5.30 ರ ವೇಳೆಗೆ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿಶಾಮಕ ದಳ ಕೂಡಲೇ ಆಗಮಿಸಿ  ಬೆಂಕಿ ನಂದಿಸಿದ್ದಾರೆ.

ಮಾವಿನಕಟ್ಟೆ ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಪ್ರವೀಣ್ ಮಾವಿನಕಟ್ಟೆ, ಕಾರ್ಯದರ್ಶಿಯಾಗಿ ಲಿಖಿತ್ ಕೆ.ಸಿ.

ಮಾವಿನಕಟ್ಟೆ: ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್, ಮಾವಿನಕಟ್ಟೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕ್ಲಬ್‌ನ ನೂತನ ಅಧ್ಯಕ್ಷರಾಗಿ ಪ್ರವೀಣ್ ಮಾವಿನಕಟ್ಟೆ ಅವರು ಮರು ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಲಿಖಿತ್ ಕೆ.ಸಿ., ಜತೆ ಕಾರ್ಯದರ್ಶಿಯಾಗಿ ಮನೋಜ್ ದೇವ, ಉಪಾಧ್ಯಕ್ಷರಾಗಿ ಕಿರಣ್ ಮಾವಿನಕಟ್ಟೆ, ಖಜಾಂಜಿಯಾಗಿ ಫಾರೂಕ್ ಮಾವಿನಕಟ್ಟೆ, ಸಂಘಟನಾ ಕಾರ್ಯದರ್ಶಿಯಾಗಿ ರಿಯಾಜ್ ಮಾವಿನಕಟ್ಟೆ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ...

ಹಾಲೆಮಜಲು: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಚೌತಿ ಪೂಜಾ ಕಾರ್ಯಕ್ರಮ

ಹಾಲೆಮಜಲು: ಆದರ್ಶ ಯೂತ್ ಕ್ಲಬ್ (ರಿ.) ಹಾಲೆಮಜಲು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಚೌತಿ ಪೂಜಾ ಕಾರ್ಯಕ್ರಮವು ಶ್ರೀ ವೆಂಕಟೇಶ್ವರ ಸಭಾಭವನ, ಹಾಲೆಮಜಲು ಇಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ವೆಂಕಪ್ಪ ಗೌಡ ಕಟ್ಟೆಕೋಡಿ, ಪ್ರಗತಿಪರ ಕೃಷಿಕರು, ಹಾಲೆಮಜಲು ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಶ್ರೀ ಆಕರ್ಷ್ ಕುಳ್ಳಂಪಾಡಿ, ಗೌರವಾಧ್ಯಕ್ಷರು,...

ಸೆ.26 ರಂದು ಯುವಜನ ಸಂಯುಕ್ತ ಮಂಡಳಿ ವಾರ್ಷಿಕ ಮಹಾಸಭೆ – ಆಮಂತ್ರಣ ಬಿಡುಗಡೆ

ಸುಳ್ಯ ಯುವಜನ ಸಂಯುಕ್ತ ಮಂಡಳಿ ವಾರ್ಷಿಕ ಮಹಾಸಭೆಯು ಸೆ.26 ರಂದು ಸುಳ್ಯದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರದ ಬಿಡುಗಡೆ ಪಂಜದ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಸುಳ್ಯ ವರ್ತಕರ ಸಂಘದ ಗೌರವಾಧ್ಯಕ್ಷ ಪಿ.ಬಿ.ಸುಧಾಕರ ರೈ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪಂಚಶ್ರೀ ಪಂಜ ಸ್ಪೋಟ್ಸ್ ಕ್ಲಬ್‌ ಅಧ್ಯಕ್ಷ...

ಐನೆಕಿದು : ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ವಿಶ್ವ ಸಾಕ್ಷರತಾ ದಿನಾಚರಣೆ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ವಿಶ್ವ ಸಾಕ್ಷರತಾ ದಿನಾಚರಣೆಯನ್ನು ಐನೆಕಿದು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ ಸತೀಶ್ ಕೂಜುಗೋಡು ವಹಿಸಿ, ವಿಶ್ವ ಸಾಕ್ಷರತಾ ದಿನದ ಮಹತ್ವ ಹಾಗೂ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ದೊರೆಯಬೇಕಾದ ಅಗತ್ಯತೆಯ ಕುರಿತು ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾಜಿ R.C. ಲಯನ್ ಪ್ರೊ. ರಂಗಯ್ಯ ಶೆಟ್ಟಿಗಾರ್...

“ಮೂರ್ತೆದಾರರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿ ಸಂಘಗಳ ಕೊಡುಗೆ ಮಹತ್ವದ್ದು” : ನಳಿನ್ ಕುಮಾರ್ ಕಟೀಲ್ | ಸುಳ್ಯದಲ್ಲಿ ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಶಾಖೆ ಉದ್ಘಾಟನೆ | ಮಾಜಿ ಸಚಿವ ರಮನಾಥ ರೈ ಅವರ 75ನೇ ಹುಟ್ಟುಹಬ್ಬ ಆಚರಣೆ

ಸುಳ್ಯ : ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿ., ಬಿ.ಸಿ. ರೋಡು ಇದರ ಸುಳ್ಯ ಶಾಖೆಯ ಉದ್ಘಾಟನಾ ಸಮಾರಂಭ ಸೆ. 13ರಂದು ಗಾಂಧಿನಗರದ ಆರ್.ಕೆ. ಕಾಂಪ್ಲೆಕ್ಸ್‌ನಲ್ಲಿ ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ನೂತನ ಶಾಖೆಯನ್ನು ಉದ್ಘಾಟಿಸಿದರು. ಮಾಜಿ ಸಚಿವ ರಮಾನಾಥ ರೈ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ...
Loading posts...

All posts loaded

No more posts

error: Content is protected !!