Ad Widget

ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಸಾಮೂಹಿಕ ತಂಬಿಲ,ಅಗೇಲು ಸೇವೆ

ಕಲ್ಮಡ್ಕ ಗ್ರಾಮದ ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವಕ್ಕೆ 7ನೇ ವರ್ಷದ ಸಾಮೂಹಿಕ ತಂಬಿಲ ಮತ್ತು ಶ್ರೀ ಮುಳ್ಳುಗುಳಿಗ ದೈವಕ್ಕೆ ಅಗೇಲು ಸಮ್ಮಾನ ಕಾರ್ಯಕ್ರಮ ಡಿ.06 ರ ಸಂಜೆ ಮೊಕ್ತೇಸರರಾದ ರಾಮಚಂದ್ರ ಎಡಪತ್ಯ ಮತ್ತು ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯ ನೇತೃತ್ವದಲ್ಲಿ ನಡೆಯಿತು. ಸಾಮೂಹಿಕ ತಂಬಿಲ ಹಾಗೂ ಅಗೇಲು ಸೇವೆಯನ್ನು ಕೃಷ್ಣಮಣಿಯಾಣಿ ನೆಟ್ಟಾರು ನೆರವೇರಿಸಿದರು. 250 ಗ್ರಾಮಸ್ಥರಿಂದ ತಂಬಿಲ ಹಾಗೂ ಅಗೇಲು ಸೇವೆ ನಡೆಯಿತು.

. . . . . . . . .

ಈ ಸಂದರ್ಭದಲ್ಲಿ ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಬಳಗ, ಕಾಚಿಲ ಶ್ರೀ ಮಹಾವಿಷ್ಣು ಮೂರ್ತಿ ಮಹಿಳಾ ಸೇವಾ ಬಳಗ , ಯುವಸ್ಫೂರ್ತಿ ಸೇವಾ ಸಂಘ , ನವೋದಯ ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಇತರ ಸಂಘ ಸಂಸ್ಥೆಗಳ ಸದಸ್ಯರು ಸಹಕರಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading