Ad Widget

ಸಂಪಾಜೆ : ವನಮಹೋತ್ಸವ ಕಾರ್ಯಕ್ರಮ

ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಸಂಪಾಜೆ ಕೊಡಗು ಇದರ ಆಶ್ರಯದಲ್ಲಿ ಶ್ರೀ ಭಗವಾನ್ ಸಂಘ (ರಿ)ಊರುಬೈಲು ಇವರಿಂದ ಜು.7 ರಂದು ಸಂಪಾಜೆಯಲ್ಲಿ ವನಮಹೋತ್ಸವ ಆಚರಣೆ ಮಾಡಲಾಯಿತು. ಸಂಪಾಜೆ ಗೇಟ್ ಬಳಿಯ ಮುಖ್ಯ ರಸ್ತೆಯ ಅಂಚಿನಲ್ಲಿ ಕಳೆನಾಶ ಮಾಡಿ ,ಪ್ಲಾಸ್ಟಿಕ್ ತ್ಯಾಜ್ಯ ಆಯುವ ಮೂಲಕ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು. ಆ ಬಳಿಕ ರಸ್ತೆಯ ಅಂಚಿನುದ್ದಕ್ಕೂ ಸಸಿಗಳನ್ನು ನೆಟ್ಟು ರಕ್ಷಣಾ ಬೇಲಿ ಅಳವಡಿಸುವ ಮೂಲಕ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಈ ಕಾರ್ಯಕ್ರಮದ ನೇತೃತ್ವವನ್ನು ಸೊಸೈಟಿ ಅದ್ಯಕ್ಷ ಅನಂತ್ ಊರುಬೈಲು ,ಸಂಘದ ಅದ್ಯಕ್ಷ ದಿನೇಶ್ ಸಣ್ಣಮನೆ ,ಕಾರ್ಯದರ್ಶಿ ಯತೀಶ್ ಹನಿಯಡ್ಕ ವಹಿಸಿದ್ದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ರಾಜಾರಾಮ ಕಳಗಿ ,ಸಿಇಒ ಆನಂದ ಬಿ.ಕೆ ,ಸೊಸೈಟಿ ನಿರ್ದೇಶಕರು ,ಸಿಬ್ಬಂದಿಗಳು ,ಭಗವಾನ್ ಸಂಘದ ಸದಸ್ಯರು ಭಾಗವಹಿಸಿದ್ದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!