Ad Widget

ಸೇತುವೆ ಕಾಮಗಾರಿ ಪೂರ್ಣಗೊಳ್ಳದೇ ಪಡಿತರ ಪಡೆಯಲು ಸಂಕಟ ಪಡುತ್ತಿರುವ ಸೇವಾಜೆ ಜನ – ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಮನವಿಗೆ ಸ್ಪಂದಿಸಿದ ತಹಶೀಲ್ದಾರ್

ಸೇವಾಜೆ ಸೇತುವೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಸೇವಾಜೆ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ದೇವಚಳ್ಳ ಗ್ರಾಮ ಪಂಚಾಯಿತ್ ವ್ಯಾಪ್ತಿಗೆ ಒಳಪಟ್ಟ ಸೇವಾಜೆಯ 8 ಬಡ ಕುಟುಂಬಗಳಿಗೆ ತಳೂರು ಪಡಿತರ ಕೇಂದ್ರಕ್ಕೆ ಬಂದು ಪಡಿತರ ಪಡೆಯಲು ಸುತ್ತು ಬಳಸಿ ಬರಬೇಕಾಗಿತ್ತು. ಇಲ್ಲಿಗೆ ಬರುವುದು ಬಡವರಿಗೆ ಹೊರೆಯಾಗುವುದನ್ನು ಮನಗಂಡು ಮಳೆ ಸಂಪೂರ್ಣ ಮುಗಿಯುವ ತನಕ ಮರ್ಕಂಜ ಪ್ರಾ. ಕೃ. ಪ. ಸ. ಸಂಘದಲ್ಲಿ ಪಡಿತರ ವಿತರಿಸಲು ಕ್ರಮ ಕೈಗೊಳ್ಳುವಂತೆ ಮಾನ್ಯ ತಹಶೀಲ್ದಾರ್ & ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕರು ಮಂಗಳೂರು ಇವರಿಗೆ ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಸ್ಪಂದಿಸಿರುವ ತಹಶಿಲ್ದಾರ್ ಕೂಡಲೇ ಕ್ರಮ ಕೈಗೊಂಡು ಮುಂದಿನ ತಿಂಗಳು ಮರ್ಕಂಜದಲ್ಲಿ ಪಡಿತರ ವಿತರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!