Ad Widget

ಐವರ್ನಾಡಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ರಾಷ್ಟ್ರಾಭಿಮಾನಿ ವೇದಿಕೆ ಐವರ್ನಾಡು ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆಯು ಜು.26 ರಂದು ಐವರ್ನಾಡು ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ, ನವೀನ್ ಚಾತುಬಾಯಿ ಉಪಸ್ಥಿತರಿದ್ದರು. ಕಿಶನ್ ಜಬಳೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಎ.ಪಿ.ಎಂ.ಸಿ.ಉಪಾಧ್ಯಕ್ಷ ನವೀನ್ ಕುಮಾರ್ ಸಾರಕರೆ, ಭವಾನಿಶಂಕರ ಪೂಜಾರಿಮನೆ, ಗಣೇಶ್ ಕೊಚ್ಚಿ, ರಾಜೀವಿ ಪರ್ಲಿಕಜೆ, ರಾಜೀವಿ ಲಾವಂತಡ್ಕ, ಅನಂತಕುಮಾರ್ ಖಂಡಿಗೆಮೂಲೆ, ಚಿದಾನಂದ ಬಾಂಜಿಕೋಡಿ,ರಕ್ಷಿತ್ ಸಾರಕೂಟೇಲು, ಶಿವಕುಮಾರ್ ಬಾಂಜಿಕೋಡಿ,ಶರವಣ ಬಾಂಜಿಕೋಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!