Ad Widget

ಸುಬ್ರಹ್ಮಣ್ಯ :- ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಸಭೆಯು ಜು.28 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ಅದ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕೃಷಿ-ಬೆಳೆಗಳ ಸಮಸ್ಯೆ(ಹಳದಿರೋಗ) ಪರಿಹಾರದ ಚರ್ಚೆ, ಅರಣ್ಯ ಕಾನೂನು-ರೈತರ ಸಮಸ್ಯೆಗಳ ಪರಿಹಾರ ಮತ್ತು ಪ್ರತೀ ಗ್ರಾಮ ಬೇಟಿ ಮಾಡಿ ಜನಜಾಗೃತಿ ಮೂಡಿಸುವುದು ಹಾಗೂ ಇತರ ಸಾಮಾಜಿಕ ಚಟುವಟಿಕೆಗಳ ಬಗ್ಗೆ ನಿರ್ಣಯ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಜಯಕುಮಾರ್ ಶಿರಾಡಿ, ಉಮೇಶ್ ಕಜ್ಜೋಡಿ, ಅಚ್ಯುತ ಗೌಡ, ಜಯಪ್ರಕಾಶ್ ಕೂಜುಗೋಡು, ಹರೀಶ್.ಕೆ.ಎಸ್, ನವೀನ್.ಕೆ, ಅವಿನಾಶ್.ಬಿ, ಅಶ್ವಿನ್.ಜೆ, ಎಂ.ಪಿ.ಯೂಸುಫ್, ಗ್ರಾಮಪಂಚಾಯತ್ ಸದಸ್ಯರಾದ ಈರೇಶ್ ಗೌಡ ಐತ್ತೂರು, ರವೀಂದ್ರ ಕುಮಾರ್ ರುದ್ರಪಾದ ಮುಂತಾದವರು ಉಪಸ್ಥಿತರಿದ್ದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!