Ad Widget

ಎನ್ಎಂಸಿ: “ವೃತ್ತಿ ಜೀವನದ ಕಡೆಗೆ ಮಾರ್ಗಸೂಚಿ”ರಾಜ್ಯಮಟ್ಟದ ವೆಬಿನರ್


ನೆಹರೂ ಮೆಮೋರಿಯಲ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದಿಂದ “ವೃತ್ತಿ ಜೀವನದ ಕಡೆಗೆ ಮಾರ್ಗಸೂಚಿ”ಎಂಬ ವಿಷಯದ ಬಗ್ಗೆ ರಾಜ್ಯಮಟ್ಟದ ವೆಬಿನರ್ ಜುಲೈ 30ರಂದು ನಡೆಯಿತು.
ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಕುಮಾರಿ ಕಾವ್ಯ ಪಿ ಹೆಗ್ಡೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಪೂವಪ್ಪ ಕಣಿಯೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರುದ್ರಕುಮಾರ್ ಎಂ. ಎಂ ,ಗುಣಮಟ್ಟ ಖಾತ್ರಿ ಕೋಶದ ಸಂಯೋಜಕಿ ಶ್ರೀಮತಿ ರತ್ನಾವತಿ ಡಿ ಉಪಸ್ಥಿತರಿದ್ದರು. ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ
ರಮ್ಯ ಎಸ್ . ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸ್ನಾತಕೋತ್ತರ ವಾಣಿಜ್ಯಶಾಸ್ತ್ರದ ಉಪನ್ಯಾಸಕರಾದ ಮಿಥುನ್ ಕೆ ಅತಿಥಿಗಳನ್ನು ಪರಿಚಯಿಸಿ ಉಪನ್ಯಾಸಕಿ ಕುಮಾರಿ ಅಶ್ವಿನಿ.ಡಿ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಆಶಾ ಸುರೇಶ್ ಕೆ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!