Ad Widget

ಕಟ್ಟ :- ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯೋತ್ಸವದ ಹಿಂದಿನ ದಿನ ಆ.14 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋವಿಂದನಗರ ಹಾಗೂ ಅಂಗನವಾಡಿ ಕೇಂದ್ರ ಗೋವಿಂದನಗರ ಕಟ್ಟ ಇಲ್ಲಿ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಅಂಗನವಾಡಿ ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರ ಸಹಕಾರದಿಂದ ಶಾಲಾ ಸ್ವಚ್ಚತಾ ಕಾರ್ಯ ನಡೆಯಿತು. ಸ್ವಚ್ಚತಾ ಕಾರ್ಯಕ್ರಮದ ಜೊತೆಗೆ ತರಕಾರಿ ತೋಟದ ರಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ಮೋಹಿನಿ, ಶ್ರೀಮತಿ ಶಿವಮ್ಮ, ಶ್ರೀಮತಿ ಶುಭಲತಾ, ಎಸ್.ಡಿ.ಎಂ.ಸಿ. ಅದ್ಯಕ್ಷರಾದ ಮುತ್ತಪ್ಪ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮಣಿಕಂಠ ಕೊಳಗೆ, ಶ್ರೀಮತಿ ಕಮಲ, ಶಾಲಾ ಶಿಕ್ಷಕರಾದ ಶ್ರೀ ಗಣೇಶ್.ಪಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪುಷ್ಪಾವತಿ, ಅಡುಗೆ ಸಹಾಯಕರಾದ ಶ್ರೀಮತಿ ಜಾನಕಿ, ಶ್ರೀಮತಿ ವೇದಾವತಿ ಮುಂತಾದವರು ಉಪಸ್ಥಿತರಿದ್ದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!