Ad Widget

ಬೆಳ್ಳಾರೆ: ಸ್ನೇಹಿತರ ಕಲಾಸಂಘ ವತಿಯಿಂದ ಸರಳ ಹಾಗೂ ಸಾಂಕೇತಿಕ ಶ್ರೀಕೃಷ್ಣಾಷ್ಟಮಿ ಆಚರಣೆ

ಸ್ನೇಹಿತರ ಕಲಾಸಂಘ (ರಿ.) ಬೆಳ್ಳಾರೆ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸ್ನೇಹಿತರ ಕಲಾಸಂಘದ ಸಭಾಂಗಣದಲ್ಲಿ ಸರ್ಕಾರದ ಸೂಚನೆಯಂತೆ ಸರಳ ಹಾಗೂ ಸಾಂಕೇತಿಕವಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಆ.30 ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರತಿಷ್ಠಿತ ಸಂಸ್ಥೆ ರೋಟರಿ ಕ್ಲಬ್ ಇದರ ಬೆಳ್ಳಾರೆ ಟೌನ್ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಉದ್ಯಮಿ ಸ್ನೇಹಿತರ ಕಲಾಸಂಘದ ಪೂರ್ವಾಧ್ಯಕ್ಷ ಪದ್ಮನಾಭ ಬೀಡು ಇವರನ್ನು ಅಭಿನಂದಿಸಿ ಗೌರವಿಸಿ ಶುಭಹಾರೈಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ನೇಹಿತರ ಕಲಾಸಂಘ(ರಿ.) ಬೆಳ್ಳಾರೆ ಇದರ ಅಧ್ಯಕ್ಷ ಸಂಜಯ್ ನೆಟ್ಟಾರು, ನಿಕಟಪೂರ್ವಾಧ್ಯಕ್ಷ ಕೊರಗಪ್ಪ ನಾಯ್ಕ ಕುರುಂಬುಡೇಲು, ಕಾರ್ಯದರ್ಶಿ ವಸಂತ ಪಡ್ಪು, ಕೋಶಾಧಿಕಾರಿ ಶ್ರೀನಿವಾಸ ಕುರುಂಬುಡೇಲು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!