ಮುಕ್ಕೂರು ಜ್ಯೋತಿ ಯುವಕ ಮಂಡಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸೆ.5 ರಂದು ಪೆರುವೋಡಿ ದೇವಾಲಯದ ವಠಾರದಲ್ಲಿ ನಡೆಯಿತು.
ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ನಿತಿನ್ ಕಾನಾವು, ಕಾರ್ಯದರ್ಶಿಯಾಗಿ ಧನಂಜಯ ನೀರ್ಕಜೆ, ಕೋಶಾಧಿಕಾರಿಯಾಗಿ ದಯಾನಂದ ಗೌಡ ಜಾಲು, ಉಪಾಧ್ಯಕ್ಷರಾಗಿ ಸಂದೀಪ್ ಕುಂಜಾಡಿ, ಜತೆ ಕಾರ್ಯದರ್ಶಿಯಾಗಿ ಚರಣ್ ಮಡಿವಾಳ ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ, ಕಾರ್ಯದರ್ಶಿ ನವೀನ್ ಶೆಟ್ಟಿ ಬರಮೇಲು ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಯುವಸೇನೆಯ ಸಚಿನ್ ರೈ ಪೂವಾಜೆ, ಪೆರುವೋಡಿ ದೇವಾಲಯದ ಅರ್ಚಕ ಸುರೇಶ್ ಉಪಾಧ್ಯಾಯ, ಆಡಳಿತ ಮಂಡಳಿ ಸದಸ್ಯ ಕುಶಾಲಪ್ಪ ಗೌಡ ಪೆರುವಾಜೆ ಮೊದಲಾದವರಿದ್ದರು.
- Sunday
- September 22nd, 2024