Ad Widget

ಸಂಘ ಧ್ಯೇಯ ಕಿರುಚಿತ್ರಕ್ಕೆ ಮುಹೂರ್ತ

ಎ.ಯು. ಕ್ರಿಯೇಶನ್ ನಿರ್ಮಾಣದ “ಸಂಘಧ್ಯೇಯ” ಎಂಬ ಕನ್ನಡ ಕಿರುಚಿತ್ರದ ಮುಹೂರ್ತವು ಉಪ್ಪಿನಂಗಡಿಯ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಡೆಯಿತು. ಕಿರುಚಿತ್ರದ ನಾಯಕನಾಗಿ ನವನೀತಕೃಷ್ಣ ಜೋಗಿಯಡ್ಕರವರು ಬಣ್ಣ ಹಚ್ಚಲಿದ್ದು, ಕಥೆ,ಚಿತ್ರಕಥೆ,ಸಂಭಾಷಣೆ ಮತ್ತು ನಿರ್ದೇಶನವನ್ನು ಅಚಲ್ ಉಬರಡ್ಕ ಮಾಡಲಿದ್ದಾರೆ.


ಈ ಕಿರುಚಿತ್ರದಲ್ಲಿ ಶ್ರೀವತ್ಸ ಭಾರಧ್ವಾಜ, ಕಿರಣ್ ಕುಮಾರ್ ಶಾಂತಿನಗರ ಮತ್ತಿತರರು ಪಾತ್ರಗಳಿಗೆ ಜೀವ ತುಂಬಲಿದ್ದಾರೆ. ಛಾಯಾಗ್ರಾಹಕರಾಗಿ ವಿನಯ್ ರೈ ಮತ್ತು ಚಂದ್ರಶೆಖರ ಶೆಟ್ಟಿಯವರು ಸಹಕರಿಸಲಿದ್ದಾರೆ.
ಈ ಕಿರುಚಿತ್ರವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಧ್ಯೇಯವನ್ನು ಇಟ್ಟುಕೊಂಡು, ಜನರಲ್ಲಿ ರಕ್ತದಾನವು ಶ್ರೇಷ್ಠವಾದದ್ದು ಎಂಬ ಸಂದೇಶವನ್ನು ಸಾರುವಂತೆ ಈ ಕಥೆಯನ್ನು ಹೆಣೆಯಲಾಗಿದೆ.
ಸಂಘ ಧ್ಯೇಯ ಕಿರುಚಿತ್ರದ ಪೋಸ್ಟರನ್ನು ಉಪ್ಪಿನಂಗಡಿಯ ಶ್ರೀರಾಮ ಹಾಗೂ ಇಂದ್ರಪ್ರಸ್ಥ ಶಾಲೆಯ ಸಂಚಾಲಕರು ಮತ್ತು ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯು.ಜಿ. ರಾಧಾರವರು ಬಿಡುಗಡೆಗೊಳಿಸಿದರು.
ಈ ಸಮಯದಲ್ಲಿ ದೇವಸ್ಥಾನದ ಅರ್ಚಕರಾದ ನಾಗರಾಜ ಭಟ್,ಸಾಯಿಗೀತ ಯು. ಆರ್.,ಸುಷ್ಮಾ ಚಂದ್ರಶೇಖರ್ ಶೆಟ್ಟಿಯವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!