Ad Widget

ನಾಲ್ಕೂರು : ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸಹಾಯಹಸ್ತ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ವತಿಯಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಆದಿಮಾಯೆ ಸ್ವ-ಸಹಾಯ ಸಂಘದ ಸದಸ್ಯೆ ಪ್ರೇಮಾರವರಿಗೆ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ವೈಯಕ್ತಿಕವಾಗಿ ಸಂಗ್ರಹಿಸಿದ ಮೊತ್ತವನ್ನು ಅವರ ಮನೆಗೆ ಬೇಟಿ ನೀಡಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅವರು ಆರ್ಥಿಕವಾಗಿ ಕಷ್ಟದಲ್ಲಿರುವುದನ್ನು ಮನಗಂಡು ಕ್ಷೇತ್ರದಿಂದ ಕೊಡಮಾಡುವ ಮಾಸಾಶನಕ್ಕಾಗಿ ಕ್ಷೇತ್ರಕ್ಕೆ ಮೇಲ್ವಿಚಾರಕರ ಮೂಲಕ ತಾಲೂಕು ಯೋಜನಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್, ವಲಯ ಮೇಲ್ವಿಚಾರಕರಾದ ಮುರಳೀಧರ ಹಾಗೂ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕರುಣಾಕರ ಸಂಪ್ಯಾಡಿ, ಲೋಹಿತ್ ಚೆಮ್ನೂರು, ನವೀನ್ ಗುಡ್ಡೆಮನೆ ಉಪಸ್ಥಿತರಿದ್ದರು.

(ವರದಿ :- ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!