Ad Widget

ದುಗ್ಗಲಡ್ಕ : ಪ್ರೊಬೆಷನರಿ ತಹಶೀಲ್ದಾರ್ ಅಕ್ರಂ ಷಾ ವಿದ್ಯಾರ್ಥಿಗಳೊಂದಿಗೆ ಸಂವಾದ

ಸುಳ್ಯ ತಾಲೂಕಿನ ಪ್ರೊಬೆಷನರಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತೀಯ ಆಡಳಿತ ಸೇವೆಯ ‌ಅಧಿಕಾರಿ ಅಕ್ರಂರವರು ಸೆ.17 ರಂದು ಸರಕಾರಿ ಪ್ರೌಢಶಾಲೆ ದುಗ್ಗಲಡ್ಕಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತುಂಬು ಸೌಜನ್ಯದೊಂದಿಗೆ ತಮ್ಮ ಯು ಪಿ ಎಸ್ ಸಿ ಯ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಉತ್ತಮ ಶೈಕ್ಷಣಿಕ ತಳಹದಿಯನ್ನು ರೂಪಿಸಿಕೊಂಡು, ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಮುನ್ನಡೆಯಬೇಕು, ಸೃಜನಶೀಲ ಹವ್ಯಾಸವನ್ನಿರಿಸಿಕೊಳ್ಳಬೇಕು ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪ್ರೇರಣಾದಾಯಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸೂಕ್ತ ರೀತಿಯಲ್ಲಿ ಉತ್ತರಿಸಿದ ಅವರು ಇನ್ನೊಮ್ಮೆ ಶಾಲೆಗೆ ಭೇಟಿ ನೀಡುತ್ತೇನೆಂದು ಭರವಸೆ ನೀಡಿದರು. ನಗರ ಪಂಚಾಯತ್ ಸದಸ್ಯೆ ಶಶಿಕಲಾ ನೀರಬಿದಿರೆ, ಮಾಜಿ ನಗರ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಮಾಧವ ಮತ್ತು ಕಂದಾಯ ಇಲಾಖೆಯ ತಿಪ್ಪೇಶ್ ರವರು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು. ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಅತ್ಯಾಡಿ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಸಂಧ್ಯಾ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!