Ad Widget

ಕೇನ್ಯ: ನೂತನ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

ಕಡಬ ತಾಲೂಕಿನ ಕೇನ್ಯ ಗ್ರಾಮದಲ್ಲಿ ಹಿಂದೂ ಜಾಗರಣ ವೇದಿಕೆ ಮಹಾವಿಷ್ಣು ಘಟಕ ಕಣ್ಕಲ್ ನೇಲಡ್ಕ ವತಿಯಿಂದ ನೂತನವಾಗಿ ನಿರ್ಮಿಸಿದ ವೀರ್ ಸಾವರ್ಕರ್ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಸೆ.18ರಂದು ನಡೆಯಿತು. ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕುಸುಮ ಎಸ್ ರೈ ರವರು ನೂತನ ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿದರು.

ವಾಸುದೇವ ಕೆರೆಕೋಡಿ ಸಭಾಧ್ಯಕ್ಷತೆ ವಹಿಸಿದ್ದರು. ರಘುನಾಥ ರೈ ಕೆರೆಕ್ಕೋಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಪಾರ್ವತಿ ಪಿ.ಡಿ ಸದಸ್ಯರು ಗ್ರಾಮ ಪಂಚಾಯತ್ ಬಳ್ಪ, ಸುಂದರ ಗೌಡ ಕೇನಾಜೆ ಅಧ್ಯಕ್ಷರು ಭಾಜಪ ಸಮಿತಿ ಕೇನ್ಯ , ಸುಬ್ರಮಣ್ಯ ಗೌಡ ಕಣ್ಕಲ್ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಬಳ್ಪ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಊರವರು ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ತಿಕ್ ಕಣ್ಕಲ್ ಅತಿಥಿಗಳನ್ನು ಸ್ವಾಗತಿಸಿದರು, ಹೃಥ್ವಿಕ್ ವಂದಿಸಿದರು. ಉಮೇಶ್ ಐನಡ್ಕ ಕಾರ್ಯಕ್ರಮವನ್ನು ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!