Ad Widget

ಸುಬ್ರಹ್ಮಣ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆಸುಬ್ರಹ್ಮಣ್ಯದ ವತಿಯಿಂದ ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು. ಕಡಬ, ಇಚ್ಲಂಪಾಡಿ, ಗುಂಡ್ಯ, ಗುತ್ತಿಗಾರು ಮಾರ್ಗದಲ್ಲಿ ಬಸ್ಸಿನ ಸಮಸ್ಯೆ ಎದುರಾಗಿದ್ದು, ಈ ಭಾಗದಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಇದನ್ನು ಕೂಡಲೇ ಸರಿಪಡಿಸಿ ಈ ಮಾರ್ಗದಲ್ಲಿ ಬಸ್ ಒದಗಿಸುವಂತೆ ಪ್ರತಿಭಟನೆಯ ಮೂಲಕ ಒತ್ತಾಯಿಸಲಾಯಿತು.

. . . . . . . . .

ಪ್ರತಿಭಟನೆಯ ಅಂಗವಾಗಿ ವನದುರ್ಗ ದೇವಸ್ಥಾನದಿಂದ ಜಾಥಾ ಹೊರಟು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟಣೆ ಮಾಡಲಾಯಿತು. ನಿಕಟಪೂರ್ವ ನಗರ ಕಾರ್ಯದರ್ಶಿ ಪ್ರಕಾಶ್ ಬಾಳುಗೋಡು ರವರು ಪ್ರತಿಭಟನೆಯ ಕುರಿತು ಮಾತನಾಡಿದರು ಹಾಗೂ ಪುತ್ತೂರು ಜಿಲ್ಲಾ ಸಂಚಾಲಕರಾದ ಹಿತೇಶ್ ಕಟ್ರಮನೆ , ರಾಜ್ಯ ಕಾರ್ಯಕಾರಣಿ ಸದಸ್ಯೆಯಾದ ಮಂದಾರ ಬಾಳುಗೋಡು, ಹಿರಿಯ ಕಾರ್ಯಕರ್ತರಾದ ರಕ್ಷಿತ್ ಪರಮಲೆ ಹಾಗೂ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!