Ad Widget

ಸುಳ್ಯ : ಶ್ರೀ.ಕ್ಷೇ.ಧ. ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತರಬೇತಿ ಕಾರ್ಯಗಾರ

ಸುಳ್ಯ ಮತ್ತು ಕಡಬ ತಾಲೂಕಿನ ಸಾಮಾನ್ಯ ಸೇವಾ ಕೇಂದ್ರ ಹಾಗೂ ಗ್ರಾಮ ಮಟ್ಟದ ಕಾರ್ಯನಿರ್ವಾಹಕರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ಜ.24 ರಂದು ತರಬೇತಿ ಕಾರ್ಯಗಾರವನ್ನು ಮಾನವ ಸಂಪನ್ಮೂಲ ಹಿರಿಯ ನಿರ್ದೇಶಕರಾದ ಶ್ರೀಮತಿ ಮಮತಾ ಹರೀಶ್ ರಾವ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಸುಳ್ಯ ತಾಲೂಕು ಯೋಜನಾಧಿಕಾರಿ ಚೆನ್ನಕೇಶವ, ಜಿಲ್ಲಾ ಯೋಜನಾಧಿಕಾರಿ ಗೋಪಾಲ ಆಚಾರ್ಯ, ಸಿ ಎಸ್ ಸಿ ಜಿಲ್ಲಾ ನೋಡೆಲ್ ಅವಿನಾಶ್, ಸಿ ಆರ್ ಇ ತರಬೇತಿ ಕೇಂದ್ರದ ಉಪನ್ಯಾಸಕಿ ಶ್ರೀಮತಿ ಸುಷ್ಮಾ, ಕಡಬ ತಾಲೂಕು ಹಾಗೂ ಸುಳ್ಯ ತಾಲೂಕಿನ ಹಣಕಾಸು ಪ್ರಬಂಧಕರು, ಜಿಲ್ಲಾ ನೋಡೆಲ್ ಅಧಿಕಾರಿಗಳು, ಐಟಿ ಮ್ಯಾನೇಜರ್, ತಾಲೂಕು ನೋಡೆಲ್ ಹಾಗೂ ಎಲ್ಲಾ ಗ್ರಾಮ ಮಟ್ಟದ ಕಾರ್ಯನಿರ್ವಾಹಕರುಗಳು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!