Ad Widget

ಕುಕ್ಕುಜಡ್ಕ : ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿ ವಿದ್ಯಾರ್ಥಿಗಳಿಗೆ ಸಚಿವರಿಂದ ಸನ್ಮಾನ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಾಧನೆಗೈದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ ಮನುಶ್ರೀ ಕೆ. (612), ದಿಶಾ ಎಂ.ವಿ. (598), ರೀನಾ ಪಿ.ಕೆ.(598), ಪ್ರತೀಕ್ ಎಂ.(589), ಕಾರ್ತಿಕ್ ಪಿ.(579), ರೇಖಾಶ್ರೀ ಎನ್.(576), ಚೈತನ್ಯ ಪಿ.(575), ರಚನ್ (568), ಚೈತ್ರಾ ಕೆ.(547) ಇವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರು, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ರವರು ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ಅವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಉಪಾಧ್ಯಕ್ಷರಾದ ಅಣ್ಣಾಜಿ ಗೌಡ, ಖಜಾಂಜಿಯಾದ ಹರ್ಷವರ್ಧನ ಬೊಳ್ಳೂರು, ಹಾಗೂ ನಿರ್ದೇಶಕರುಗಳಾದ ಅರುಣ್ ಕುಮಾರ್ ನಾಯರ್ ಕಲ್ಲು, ಆನಂದ ಗೌಡ ಚಿಲ್ಪಾರು, ಸುಪ್ರೀತ್ ಮೋಂಟಡ್ಕ, ವೆಂಕಟ್ರಮಣ ಇಟ್ಟಿಗುಂಡಿಯವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರುಗಳಾದ ಸಂಕೀರ್ಣ ಚೊಕ್ಕಾಡಿಯವರು ಸ್ವಾಗತಿಸಿದರು .ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ತೇಜಸ್ವಿ ಕಡಪಳರವರು ಧನ್ಯವಾದಗೈದರು. ಶಾಲಾ ಶಿಕ್ಷಕಿ ಸಂಧ್ಯಾ ಕುಮಾರಿಯವರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!