Ad Widget

ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪ – ಆರೋಪಿ ದೋಷಮುಕ್ತಿ

ಕರ್ತವ್ಯಕ್ಕೆ ಅಡ್ಡಿಪಡಿಸಿ ಅರಣ್ಯ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು ಸರ್ಕಾರಿ ಸ್ವತ್ತನ್ನು ನಾಶಪಡಿಸಿ ಜೀವ ಬೆದರಿಕೆ ಒಡ್ಡಿದ್ದ ಆರೋಪದ ಆರೋಪಿಯನ್ನು ಸುಳ್ಯ ನ್ಯಾಯಾಲಯ ದೋಷಮುಕ್ತಗೊಳಿಸಿದೆ.
ಪ್ರಕರಣದ ವಿವರ : ದಿನಾಂಕ 07/09/2016 ರಂದು ಅಲೆಟ್ಟಿ ಗ್ರಾಮದ ನಾರ್ಕೋಡು ಎಂಬಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆರೋಪಿ ಆಶಿಶ್ ಕುಮಾರ್ ಚಾಲಕನಿಗೆ ಖಾಲಿ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚಿಸಿದ್ದು, ಆರೋಪಿ ಆಶಿಶ್ ಕುಮಾರ್ ಚಾಲಕ ಟಿಪ್ಪರ್ ಲಾರಿಯನ್ನು ನಿಲ್ಲಿಸದೇ ವೇಗವಾಗಿ ಮುಂದಕ್ಕೆ ಸಾಗಿದ್ದು ನಂತರ ಅರಣ್ಯ ಸಿಬ್ಬಂದಿಗಳು ತಡೆದು ನಿಲ್ಲಿಸಿದ್ದು, ಆ ಸಮಯ ಹಿಂದುಗಡೆಯಿಂದ ಬಂದ ಆರೋಪಿ ಆಶಿಶ್ ಕುಮಾರ್ ವಸತಿ ಗೃಹದ ಎದುರು ನಿಂತಿದ್ದ ಅರಣ್ಯ ಸಿಬ್ಬಂದಿಯ ಕರ್ತವ್ಯ ನಿರ್ವಹಿಸದಂತೆ ಅಕ್ರಮ ತಡೆವೊಡ್ಡಿ ಅವಾಚ್ಯ ಶಬ್ದಗಳಿಂದ ಬೈದು, ವಸತಿ ಗೃಹದ ಎದುರು ಇದ್ದ ಸರ್ಕಾರಿ ಸ್ವತ್ತನ್ನು ಜಖಂಗೊಳಿಸಿ ನಷ್ಟವನ್ನು ಉಂಟು ಮಾಡಿದ್ದು ಹಾಗೂ ಜೀವ ಬೆದರಿಕೆ ಒಡ್ಡಿದ್ದ ಎಂದು ಆರೋಪಿಸಲಾಗಿತ್ತು. ದೂರಿನ ಮೇರೆಗೆ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಯ ವಿರುದ್ಧ ನ್ಯಾಯಾ ಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು ಬಳಿಕ ಈ ಪ್ರಕರಣವನ್ನು ತನಿಕೆಗೆತ್ತಿಕೊಂಡ ಮಾನ್ಯ ಹಿರಿಯ ಸಿವಿಲ್ ಹಾಗೂ ಜೆ. ಯಮ್. ಎಫ್. ಸಿ ನ್ಯಾಯಾಲಯ ಇದರ ನ್ಯಾಯಾಧೀಶರಾದ ಎ.ಸೋಮಶೇಖರ್ ರವರು ಆರೋಪಿಯ ವಿರುದ್ದ ಅಭಿಯೋಜನೆಯು ಮಾಡಿರುವ ಆರೋಪವನ್ನು ಸಾಬೀತುಪಡಿಸಲು ಅಭಿಯೋಜನೆ ವಿಫಲವಾಗಿದೆ ಎಂಬ ಕಾರಣವನ್ನು ನೀಡಿ ಆರೋಪಿಗಳನ್ನು ದಿನಾಂಕ 01/06/2022 ರಂದು ದೋಷಮುಕ್ತಗೊಳಿಸಿ ತೀರ್ಪಿತ್ತಿರುತ್ತಾರೆ . ಆರೋಪಿಗಳ ಪರವಾಗಿ ಸುಳ್ಯದ ನ್ಯಾಯವಾದಿಗಳಾದ ಯಂ. ವೆಂಕಪ್ಪ ಗೌಡ,ಚಂಪಾ ವಿ. ಗೌಡ, ರಾಜೇಶ್ ಬಿ.ಜಿ., ಶ್ಯಾಮ್ ಪ್ರಸಾದ್ ಹಾಗೂ ಮನೋಜ್ ರವರು ವಾದಿಸಿದ್ದರು .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!