Ad Widget

ಶಾಂತಿನಗರ : ಮುಖ್ಯ ಶಿಕ್ಷಕರಾಗಿ ಪದೋನ್ನತಿ ಪಡೆದ ಶಿಕ್ಷಕರಿಗೆ ಸನ್ಮಾನ

ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದೀಗ ಮುಖ್ಯ ಶಿಕ್ಷಕಿಯಾಗಿ ಭಡ್ತಿಗೊಂಡು ವರ್ಗಾವಣೆಗೊಂಡ ಶೀಮತಿ ವಸಂತಿ ಹಾಗೂ ಶ್ರೀಮತಿ ಹೇಮಲತಾರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ಜೂ.22ರಂದು ನಡೆಯಿತು.

ಶ್ರೀಮತಿ ವಸಂತಿಯವರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ಹಾಗೂ ಶ್ರೀಮತಿ ಹೇಮಲತಾ ಎಸ್ ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕ ಇಲ್ಲಿಗೆ ಮುಖ್ಯ ಶಿಕ್ಷಕರಾಗಿ ಪದೋನ್ನತಿ ಪಡೆದಿರುತ್ತಾರೆ.
ಶಾಲಾ ಮುಖ್ಯಶಿಕ್ಷಕರು ಹಾಗೂ ಅಧ್ಯಾಪಕ ವೃಂದ , ಶಾಲಾ ಎಸ್ ಡಿ ಎಮ್ ಸಿ ಹಾಗೂ ದೀಪಾಂಜಲಿ ಮಹಿಳಾ ಮಂಡಳಿ ಶಾಂತಿನಗರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ನಝೀರ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯಶಿಕ್ಷಕರು , ಅಧ್ಯಾಪಕ ವೃಂದ ಹಾಗೂ ದೀಪಾಂಜಲಿ ಮಹಿಳಾ ಮಂಡಳಿ ಅಧ್ಯಕ್ಷರು ಹಾಗೂ ಅಂಗನವಾಡಿ ಶಿಕ್ಷಕಿ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ವಿದ್ಯಾರ್ಥಿ ಪೋಷಕರು ಹಾಗೂ ಶಾಲಾ ಎಸ್ ಡಿ ಎಮ್ ಸಿ ಸದಸ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!