Ad Widget

ಹರಿಹರ ಪಲ್ಲತ್ತಡ್ಕ : ಅಮೃತ ಗೊಂಚಲು ಸಭೆ

ಜೂ.22 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಮೃತ ಗೊಂಚಲು ಸಭೆ ನಡೆಯಿತು. ಶ್ರೀಮತಿ ಹರ್ಷಿಣಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಲ್ಲಮೊಗ್ರು ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿಜಯ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಐನೆಕಿದು ಸ್ತ್ರೀ ಶಕ್ತಿ ಗುಂಪಿನ ಸದಸ್ಯರಾದ ಶ್ರೀಮತಿ ಮೋಹಿನಿ ರವರು ಅಸೌಖ್ಯದಿಂದ ನಿಧನ ಹೊಂದಿದ ಕಾರಣ ಅವರ ಮನೆಯವರಿಗೆ ಗೊಂಚಲು ಗುಂಪಿನ ಸಹಾಯಧನವನ್ನು ಮೇಲ್ವಿಚಾರಕರಾದ ಶ್ರೀಮತಿ ವಿಜಯ ರವರ ಮುಖಾಂತರ ಹಸ್ತಾಂತರಿಸಲಾಯಿತು.
ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನೇತ್ರಾವತಿ ಅವರು ಹಾಗೂ ಸ್ತ್ರೀ ಶಕ್ತಿ ಗುಂಪಿನ ಸದಸ್ಯರುಗಳು ಉಪಸ್ಥಿತರಿದ್ದರು.
ಶ್ರೀಮತಿ ನಿರ್ಮಲ ರವರು ಪ್ರಾರ್ಥನೆ ನೆರವೇರಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹರಿಣಿ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಅನಂತೇಶ್ವರಿ ಅವರು ವಂದಿಸಿದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!