Ad Widget

ಕೆಂಪೇಗೌಡ ಜಯಂತಿ ಆಚರಣೆಯ ಪ್ರಯುಕ್ತ ರಾಜ್ಯ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರಿಂದ ಚೆಕ್ ವಿತರಣೆ


ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಒಕ್ಕಲಿಗರ ಯಾನೆ
ಗೌಡರ ಸೇವಾ ಸಂಘಕ್ಕೆ ಮತ್ತು ಉಡುಪಿ ಜಿಲ್ಲಾ ಒಕ್ಕಲಿಗರ ಗೌಡ ಸಂಘಕ್ಕೆ ರಾಜ್ಯ ಒಕ್ಕಲಿಗರ ಸಂಘ
ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ ಯವರ ಶಿಫಾರಸಿನಂತೆ ಕೆಂಪೇಗೌಡ ಜಯಂತಿಯನ್ನು
ಆಚರಿಸಲು ರೂ. 25,000/- ಚೆಕ್‌ನ್ನು ವಿತರಿಸಲಾಯಿತು.

ದಿನಾಂಕ 13.07.2022ರಂದು ಮಂಗಳೂರಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಸಭಾಂಗಣದಲ್ಲಿ ನಡೆದ ಸರಳ
ಸಮಾರಂಭದಲ್ಲಿ ಮಂಗಳೂರು ಮತ್ತು ಉಡುಪಿ ಜಿಲ್ಲಾ ಸಂಘಗಳಿಗೆ ನೀಡಲಾಯಿತು. ಈ ಸಂದರ್ಭದಲ್ಲಿ
ಎ.ಒ.ಎಲ್.ಇ ಕಛೇರಿಯ ಆಡಳಿತಾಧಿಕಾರಿ ಪ್ರಸನ್ನ ಕಲ್ಲಾಜೆ, ಕೆ.ವಿ.ಜಿ ದಂತ ಮಹಾವಿದ್ಯಾಲಯದ
ಆಡಳಿತಾಧಿಕಾರಿ ಬಿ.ಟಿ ಮಾಧವ, ಕೆ.ವಿ.ಜಿ ಪಾಲಿಟೆಕ್ನಿಕ್ ಉದ್ಯೋಗಿ ಅರುಣ್ ಕುರುಂಜಿ, ಮತ್ತು ಮಂಗಳೂರು
ಹಾಗೂ ಉಡುಪಿ ಒಕ್ಕಲಿಗರ ಗೌಡ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!