Ad Widget

ಜು.20: ಪತ್ರಿಕಾ ದಿನಾಚರಣೆಯಂದು ಚಂದ್ರಾವತಿ ಬಡ್ಡಡ್ಕ ಅವರಿಗೆ ಸನ್ಮಾನ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗು ಸನ್ಮಾನ ಕಾರ್ಯಕ್ರಮ ಜುಲೈ 20 ರಂದು ಪೂ.10 ರಿಂದ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ, ರಾಜ್ಯ ‘ಸಹಕಾರಿ ರತ್ನ’ ಪುರಸ್ಕೃತರಾದ ಸೀತಾರಾಮ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸುವರು. ಕಾಸರಗೋಡಿನ ‘ಕಣಿಪುರ’ ಯಕ್ಷಗಾನ ಮಾಸ ಪತ್ರಿಕೆಯ ಸಂಪಾದಕ ಎಂ.ನಾ.ಚಂಬಲ್ತಿಮಾರ್ ಉಪನ್ಯಾಸ ನೀಡುವರು. ಹಿರಿಯ ಪತ್ರಕರ್ತೆ ಚಂದ್ರಾವತಿ ಬಡ್ಡಡ್ಕ ಅವರನ್ನು ಸನ್ಮಾನಿಸಲಾಗುವುದು. ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ್ ಭಾಗವಹಿಸಲಿದ್ದಾರೆ ಎಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದ್ಮನಾಭ ಮುಂಡೋಕಜೆ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!