Ad Widget

ಜು.24 : ನೆಲ್ಲೂರು ಕೆಮ್ರಾಜೆ ಸೊಸೈಟಿಯ ನೂತನ ಸಭಾಭವನ ಉದ್ಘಾಟನೆ

ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ನೂತನ ಸಭಾಭವನ ಸುಮಾರು ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಜು. 24 ರಂದು ಉದ್ಘಾಟನೆಗೊಳ್ಳಲಿದೆ. ಸಭಾಭವನವನ್ನು ಬಂದರು ಮತ್ತು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದಾರೆ.

ಸಭಾ ಕಾರ್ಯಕ್ರಮ ವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಹಕಾರ ರತ್ನ ಡಾ|| ಎ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಇದರ ನಿರ್ದೆಶಕ ಶಶಿಕುಮಾರ್ ಬಾಲ್ಯೋಟು ದ.ಕ.ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಪ್ರವೀಣ್ ಬಿ. ನಾಯಕ್‌, ಸಹಕಾರ ಸಂಘಗಳ ಪುತ್ತೂರು ಉಪ ವಿಭಾಗದ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್ ಕೆ., ತಾಲೂಕು ಸಹಕಾರ ಯೂನಿಯನ್‌ ಅಧ್ಯಕ್ಷ ರಮೇಶ್ ದೇಲಂಪಾಡಿ ಆಗಮಿಸಲಿದ್ದಾರೆ.

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಬೊಳ್ಳಾಜೆ, ಸ್ಥಳ ದಾನಿಗಳಾದ ಸೋಮಶೇಖರ ಕೇಪಳಕಜೆ ಗೌರವ ಉಪಸ್ಥಿತರಿರಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!