Ad Widget

ಜು.23: ಗುತ್ತಿಗಾರು ಸೊಸೈಟಿಯ ನೂತನ ದೀನ್ ದಯಾಳ್ ರೈತ ಸಭಾಭವನ ಉದ್ಘಾಟನೆ – ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಆಗಮನ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ದೀನ್ ದಯಾಳ್ ರೈತ ಸಭಾಭವನ ಜು. 23 ರಂದು ಉದ್ಘಾಟನೆಗೊಳ್ಳಲಿದೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಭಾಭವನ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸಲಿದ್ದಾರೆ. ಗೊಬ್ಬರ ದಾಸ್ತಾನು ಮಳಿಗೆ ಉದ್ಘಾಟನೆಯನ್ನು ದ. ಕ ಜಿಲ್ಲಾ ಲೋಕಸಭಾ ಸದಸ್ಯ ನಳಿನ್‌ಕುಮಾರ್ ಕಟೀಲ್ ಮಾಡಲಿದ್ದಾರೆ. ಇಂಧನ ಸಚಿವ ಹಾಗೂ ದ.ಕ. ಉಸ್ತುವಾರಿ ಸಚಿವ ಸುನಿಲ್‌ ಕುಮಾರ್ ಭೋಜನ ಶಾಲೆ ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ ಮತ್ತು ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಸಭಾಕಾರ್ಯಕ್ರಮದ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕ್ಯಾಂಪೋ ರಬ್ಬರ್ ಮತ್ತು ಕಾಳುಮೆಣಸು ಖರೀದಿ ಕೇಂದ್ರದ ಉದ್ಘಾಟನೆಯನ್ನು ದ.ಕ.ಜಿ.ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕರಾದ ಸಂಜೀವ ಮಠಂದೂರು, ಗುತ್ತಿಗಾರು ಗ್ರಾ.ಪಂ ಅಧ್ಯಕ್ಷೆ ರೇವತಿ ಅಚಳ್ಳಿ, ದೇವಚಳ್ಳ ಗ್ರಾ.ಪಂ ಅಧ್ಯಕ್ಷೆ ಸುಲೋಚನಾ ದೇವ, ಗುತ್ತಿಗಾರು ಪ್ರಾ.ಕೃ.ಸ.ಸಂಘ ಮಾಜಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ, ಮಾಜಿ ನಿರ್ದೇಶಕ ಭರತ್ ಮುಂಡೋಡಿ ಉಪಸ್ಥಿತರಿರಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!