Ad Widget

ಜುಲೈ 21: ನಿಧಾನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ.

ಜು. 18ರಂದು ಹೃದಯಾಘಾತದಿಂದ ನಿಧನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಲಯನ್ಸ್ ಕ್ಲಬ್ ಸುಳ್ಯ ನೇತೃತ್ವದಲ್ಲಿ ವರ್ತಕರ ಸಂಘ ಸುಳ್ಯ, ಗ್ಯಾರೇಜು ಮಾಲಕರ ಸಂಘ ಸುಳ್ಯ, ಕೆವಿಜಿ ಸುಳ್ಯ ಹಬ್ಬ ಸೇವಾ ಸಮಿತಿ ಸುಳ್ಯ, ರೋಟರಿ ಕ್ಲಬ್ ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿಗಳ ಸಹಯೋಗದೊಂದಿಗೆ ಜುಲೈ 21ರಂದು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಎಂ. ಬಿ ಸದಾಶಿವ ಮಾತನಾಡಿ, ಇಂಡಸ್ಟ್ರೀಸ್ ಮಾಲಕರಾದ, ಸುಳ್ಯ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಕನ್ನೆಜಾಲು ಜಗನ್ನಾಥ ರೈ ಯವರು ಸ್ಟೀಲ್ ಇಂಡಸ್ಟ್ರೀಸ್ ನಡೆಸುತ್ತಿದ್ದವರು. ಅವರ ವ್ಯಕ್ತಿತ್ವ ಇಂದು ತುಕ್ಕು ಹಿಡಿಯದ ಸ್ಟೈನ್ ಲೆಸ್ ಸ್ಟೀಲ್ ಆಗಿತ್ತು” ಎಂದು ನುಡಿದರು.

ವರ್ತಕರ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ ರೈ, ರೋಟರಿ ಅಧ್ಯಕ್ಷ ಹಾಗೂ ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು , ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಕೆವಿಜಿ ಎಂಜಿನಿಯರಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಎನ್.ಎ. ಜ್ಞಾನೇಶ್ ರೋಟರಿ ಸಿಲ್ಕ್ ಸಿಟಿ ನಿಯೋಜಿತ ಅಧ್ಯಕ್ಷ ಮುರಳೀಧರ ರೈ, ಹಿರಿಯ ಸಾಮಾಜಿಕ ಕಾರ್ಯಕರ್ತ ರೊ. ಬಾಪೂ ಸಾಹೇಬ್, ಕೆವಿಜಿ ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಮಾತನಾಡಿ, ಜಗನ್ನಾಥ ರೈಯವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಲಯನ್ಸ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ರೂಪಶ್ರೀ ಜೆ. ರೈ ಸ್ವಾಗತಿಸಿ, ಖಜಾಂಚಿ ಡಾ. ಲಕ್ಷ್ಮೀಶ್ ವಂದಿಸಿದರು. ಕಾರ್ಯದರ್ಶಿ ದೀಪಕ್ ಕುತ್ತಮೊಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!