Ad Widget

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಡಿಸಿಸಿ ಬ್ಯಾಂಕ್ ನಿಂದ ದೇಣಿಗೆ ಹಸ್ತಾಂತರ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ದೀನ್ ದಯಾಳ್ ರೈತ ಸಭಾಭವನದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ರಾಜೇಂದ್ರ ಕುಮಾರ್ ಅವರಿಗೆ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಸಲಾಗುವ ಅಂಬುಲೆನ್ಸ್ ಸೇವೆ ಹಾಗೂ ಇತರ ಕಾರ್ಯಕ್ರಮಗಳ ಬಗ್ಗೆ ಮನವಿ ಸಲ್ಲಿಸಲಾಯಿತು. ತಕ್ಷಣವೇ ಸ್ಪಂದಿಸಿದ ಡಾ.ರಾಜೇಂದ್ರ ಕುಮಾರ್ ರವರು ಟ್ರಸ್ಟ್ ಗೆ ದೇಣಿಗೆ ಹಸ್ತಾಂತರ ಮಾಡುವ ಮೂಲಕ ತನ್ನಲ್ಲಿರುವ ಸಾಮಾಜಿಕ ಕಾಳಜಿಯೊಂದಿಗೆ ಮಾದರಿಯಾದರು. ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಂದ್ರಶೇಖರ ಕಡೋಡಿ, ಸದಸ್ಯರಾದ ಮೋಹನ್ ದಾಸ್ ಶಿರಾಜೆ ದೇಣಿಗೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶರತ್ ಕುಮಾರ್, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರುಗಳಾದ ಭರತ್ ಮುಂಡೋಡಿ, ಮುಳಿಯ ತಿಮ್ಮಪ್ಪಯ್ಯ ಹಾಗೂ ಮುಳಿಯ ಕೇಶವ ಭಟ್ ಹಾಗೂ ಅತಿಥಿಗಳು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!