Ad Widget

ವಳಲಂಬೆ : ಕಿರಣ ಯೋಗ ತರಬೇತಿ ಶಿಬಿರ ಉದ್ಘಾಟನೆ

ಕಿರಣ ರಂಗ ಅಧ್ಯಯನ ಸಂಸ್ಥೆ ಗುತ್ತಿಗಾರು ಇದರ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಒಂದು ವಾರದ ಯೋಗ ತರಬೇತಿ ಶಿಬಿರ ಉದ್ಘಾಟನೆಗೊಂಡಿತು.
ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಯೋಧ ಗಂಗಾಧರ ದಂಬೆಕೋಡಿ ಅವರು “ಕಲುಷಿತ ವಾತಾವರಣದಲ್ಲಿ ಅರೋಗ್ಯವನ್ನು ಕಾಪಾಡಿಕೊಳ್ಳುವ ಅನಿವಾರ್ಯತೆ ಇದೆ. ಯೋಗದಿಂದ ಆರೋಗ್ಯ ಸಾಧ್ಯ. ಕಿರಣ ಸಂಸ್ಥೆ ಸಮಾಜಮುಖಿ ಕೆಲಸದಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ ಎಂದರು.
ಕಿರಣ ರಂಗ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಯೋಗೀಶ್ ಹೊಸೋಳಿಕೆ ಅಧ್ಯಕ್ಷತೆ ವಹಿಸಿದ್ದರು. ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ಯೋಗ ತರಬೇತಿ ನಡೆಸಿಕೊಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಸನತ್ ಮುಳುಗಾಡು, ರಾಜೇಶ್ ಮಾವಿನಕಟ್ಟೆ, ಶಶಿ ದೇರಾಜೆ, ಕೇಶವ ಕೊರಂಬಡ್ಕ, ಕುಶಾಲಪ್ಪ ಹೊಸೋಳಿಕೆ, ನವೀನ್ ಪುಚ್ಚಪ್ಪಾಡಿ ಹಾಗೂ ಶಿಬಿರಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!