ಸುಳ್ಯ ಸಿ ಎ ಬ್ಯಾಂಕ್ ನಲ್ಲಿ ಕಳೆದ 29 ವರ್ಷಗಳಿಂದ ವಿವಿಧ ಹುದ್ದೆಗಳನ್ನು ನಿಭಾಯಿಸಿ ಹಿರಿಯ ಗುಮಾಸ್ತೆಯಾಗಿ ಮೇ. 31ರಂದು ನಿವೃತ್ತರಾದ ಶ್ರೀಮತಿ ಜಲಜಾಕ್ಷಿ ಪಿ ಕೆ ಇವರಿಗೆ ಸಂಘದ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಯಿತು. ಸಂಘದ ಅಧ್ಯಕ್ಷರಾದ ಬಾಲಗೋಪಾಲ ಎಂ ಉಪಸ್ಥಿತರಿದ್ದು ನಿವೃತ್ತರಿಗೆ ಸನ್ಮಾನಿಸಿ, ಶುಭ ಹಾರೈಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಎಸ್ ಪಿ ನಿರೂಪಿಸಿದರು. ಉಪಾಧ್ಯಕ್ಷರಾದ ಶೀನಪ್ಪ ಬಯಂಬು ವಂದನಾರ್ಪಣೆಗೈದರು. ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿಗಳು ಹಾಗೂ ಕಾನೂನು ಸಲಹೆಗಾರರು ಉಪಸ್ಥಿತರಿದ್ದರು.
- Saturday
- September 21st, 2024