Ad Widget

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಬಡ ಮಕ್ಕಳಿಗೆ ಪುಸ್ತಕ ವಿತರಣೆ

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಜೂ.4 ರಂದು ಅಡ್ತಲೆ ಸ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ನಿವೃತ್ತ ಮಾಜಿ ಸೈನಿಕರಾದ ಕಮಲಾಕ್ಷಯವರು ಕಾರ್ಯಕ್ರಮ ಉದ್ಘಾಟಿಸಿ, ಸುಮಾರು 20 ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ವಹಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ಕೊಡಗು ಜಿಲ್ಲಾಧ್ಯಕ್ಷರಾದ ಉನೈಸ್ ಪೆರಾಜೆ ಸಂಘಟನೆಯ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಸುಳ್ಯ ತಾಲೂಕು ಅಧ್ಯಕ್ಷ ರಮೇಶ್ ಕೊಡೆಂಕಿರಿ, ಕಾರ್ಯದರ್ಶಿ ತೇಜಕುಮಾರ್ ಅರಂತೋಡು ಘಟಕದ ಅಧ್ಯಕ್ಷ ನವೀನ್ ಕಲ್ಲುಗುಡ್ಡೆ ಕಾರ್ಯದರ್ಶಿ ರಾಧಾಕೃಷ್ಣ ಅರಮನೆಗಯ ಮಹಿಳಾ ಘಟಕದ ಅಧ್ಯಕ್ಷೆ ಯಶೋದ ಅರಮನೆಗಯ ಉಪಸ್ಥಿತರಿದ್ದರು. ಹಾಗೂ ಅಂಬೇಡ್ಕರ್ ರಕ್ಷಣಾ ವೇದಿಕೆಯ ಕಾರ್ಯಕರ್ತರು ಉಪಸ್ಥಿತರಿದ್ದರು. ಸುಳ್ಯ ತಾಲೂಕು ಕಾರ್ಯದರ್ಶಿಯಾದ ತೇಜಕುಮಾರ್ ಸ್ವಾಗತಿಸಿ, ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!