Ad Widget

ನಡುಗಲ್ಲು: ವಿಶ್ವನಾಥ್ ಅತ್ಯಾಡಿ ಮತ್ತು ಸಹೋದರರಿಂದ ಶಾಲಾ ಮಕ್ಕಳಿಗೆ ನೋಟು ಪುಸ್ತಕ ವಿತರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ ವಿಶ್ವನಾಥ್ ಅತ್ಯಾಡಿ ಮತ್ತು ಸಹೋದರರಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ವಿತರಣಾ ಸಮಾರಂಭ ಜೂನ್ 10ರಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಮೊದಲಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಿಂದ ಸ್ವಾಗತದೊಂದಿಗೆ ಪ್ರಾಥಮಿಕ ನುಡಿಗಳು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸುಬ್ರಹ್ಮಣ್ಯ ಅತ್ಯಾಡಿ ಇವರು ಎಲ್ಲಾ ಮಕ್ಕಳಿಗೆ ಪುಸ್ತಕವನ್ನು ವಿತರಿಸಿ ಕಾರ್ಯಕ್ರಮಕ್ಕೆ ಅತ್ಯುತ್ತಮವಾದ ಮಾರ್ಗದರ್ಶನದೊಂದಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಹಾಜರಿದ್ದ ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ವಿದ್ಯಾರ್ಥಿಗಳ ಪೋಷಕರು, ಶಾಲಾ ಹಳೆ ವಿದ್ಯಾರ್ಥಿಗಳಾದ ವಿಜಯಕುಮಾರ ಚಾರ್ಮತ, ಹರೀಶ್ ಕೊಯಿಲ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಸಂದರ್ಭೋಚಿತವಾಗಿ ಮಾತನಾಡಿ ವಿದ್ಯಾರ್ಥಿಗಳನ್ನು ಕಲಿಕೆಗೆ ಪ್ರೋತ್ಸಾಹಿಸಿದರು. ಸಹ ಶಿಕ್ಷಕರಾದ ಕುಶಾಲಪ್ಪ ಟಿ ಧನ್ಯವಾದ ಸಲ್ಲಿಸಿದರು.

ಬಳಿಕ ಪೋಷಕರ ಸಹಭಾಗಿತ್ವದೊಂದಿಗೆ ಶ್ರಮದಾನ ನಡೆಸಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!