Ad Widget

ಪೆರುವಾಜೆ : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ವಿಶೇಷ ಕಾರ್ಯಕಾರಣಿ ಸಭೆಯು ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ಇಂದು ನಡೆಯಿತು.ಶಾಸಕರಾದ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನಾ ಮಾತುಗಳನ್ನು ಆಡಿದ ನೂತನ ಶಾಸಕರು
ನಾನು ಇವತ್ತು ದೀಪವನ್ನು ಬೆಳಗಿಸಿ ಉದ್ಘಾಟನೆ ‌ಮಾಡಲು ಅವಕಾಶ ಮಾಡಿಕೊಟ್ಟ ಎಲ್ಲಾ ಕಾರ್ಯಕರ್ತರಿಗೆ ತನ್ನ ವೈಯಕ್ತಿಕ ನೆಲೆಯ ಧನ್ಯವಾದಗಳನ್ನು ಅರ್ಪಿಸಿದರು. ಇವತ್ತು ಪಕ್ಷ ದೊಡ್ಡ ಹೆಮ್ಮರವಾಗಿ ಬೆಳೆಯಲು ಕಾರಣಕರ್ತರಾದ ಹಿರಿಯರ ಬಲಿದಾನವನ್ನು ನೆನೆಸಿಕೊಂಡರು. ಶಾಸಕ ಸ್ಥಾನಕ್ಕೆ ಆಭ್ಯರ್ಥಿಯಾಗಿ ನನನ್ನು ಮಂಡಲ ಸಮಿತಿಯು ಗಟ್ಟಿ‌ನಿರ್ಧಾರದಿಂದ ಆಯ್ಕೆ ಮಾಡಿದೆ. ಶಾಸಕ ಸ್ಥಾನಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ಖಂಡಿತವಾಗಿಯೂ ಕೆಲಸ ಮಾಡುತ್ತೇನೆ ಎಂದರು. ಈ ಸಂದರ್ಭದಲ್ಲಿ ತನ್ನ ಕಾರ್ಯಕ್ಷೇತ್ರದಲ್ಲಿ ಬೇರೆ ಕ್ಷೇತ್ರದ ಶಾಸಕರು ಅವರ ಪಕ್ಷದ ಚಟುವಟಿಕೆಗಳನ್ನು ಮಾಡಲಿ, ನನ್ನ ಕ್ಷೇತ್ರದಲ್ಲಿ ಏನು ಕೆಲಸ ಮಾಡಬೇಕು ಎಂದು ನನಗೆ ಗೊತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಅಗತ್ಯವಿದ್ದರೆ ನಿಮ್ಮ ಸಹಕಾರವನ್ನು ಬಯಸುತ್ತೇವೆ ಎಂದರು. ಮುಂದಿನ‌ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಕಾರ್ಯಕರ್ತರ ಸಲಹೆ, ಸಹಕಾರವನ್ನು ಕೋರಿದರು.


ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಭಾಜಪ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ಸಂದರ್ಭದಲ್ಲಿ
ಜಿಲ್ಲಾ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ಉಪಸ್ಥಿತರಿದ್ದರು. ಸುಬೋಧ್ ಶೆಟ್ಟಿ ಮೆನಾಲ ಸ್ವಾಗತಿಸಿ, ಇಂದಿರಾ ಬಿ.ಕೆ ವಂದಿಸಿದರು, ರಾಕೇಶ್ ರೈ ಕೆಡೆಂಜಿ ನಿರೂಪಿಸಿದರು. ಪಕ್ಷದ ಅಪೇಕ್ಷಿತ ಕಾರ್ಯಕರ್ತರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!