Ad Widget

ಗುತ್ತಿಗಾರು : ತಂಬಾಕು ವ್ಯಸನ ಮುಕ್ತ ಹಾಗೂ ದುಶ್ಚಟಗಳ ದುಷ್ಪರಿಣಾಮಗಳ ಕುರಿತ ಜಾಗೃತಿ

ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ತಂಬಾಕು ವ್ಯಸನ ಮುಕ್ತ ಹಾಗೂ ದುಶ್ಚಟಗಳ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವಿಷಯದ ಕುರಿತಂತೆ ಶತಾಯು ಆಯುರ್ವೇದ ಕ್ಲಿನಿಕ್ ಗುತ್ತಿಗಾರು ಇದರ ಡಾ| ನಿಶಾಂತ್.ಆರ್ನೋಜಿ ಇವರು ವಿದ್ಯಾರ್ಥಿಗಳಿಗೆ ತಂಬಾಕು ಸೇವನೆ ಹಾಗೂ ಇತರ ದುಶ್ಚಟಗಳು ಮತ್ತು ಸಾಮಾಜಿಕ ಜಾಲತಾಣಗಳಿಂದ ವಿದ್ಯಾರ್ಥಿಗಳಿಗೆ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಚೆನ್ನಮ್.ಪಿ ವಹಿಸಿದ್ದರು. ಉಪನ್ಯಾಸಕರಾದ ರಂಜಿತ್ ಅಂಬೆಕಲ್ಲು ಸ್ವಾಗತಿಸಿ,ದೀಕ್ಷಾ.ಬಿ.ಯಂ ವಂದಿಸಿದರು,ಪ್ರೀತಿ.ಪಿ.ರೈ ಕಾರ್ಯಕ್ರಮ ನಿರೂಪಿಸಿದರು ಹಾಗೂ ಎಲ್ಲಾ ಉಪನ್ಯಾಸಕರ ವೃಂದ ಸಹಕರಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!